ಕೊಲೆ ಯತ್ನ ಆರೋಪಿ ಮೇಲೆ ಫೈರಿಂಗ್, ರೌಡಿಗಳಿಗೆ ನಡುಕ ಹುಟ್ಟಿಸಿದ ತುಮಕೂರು ಪೊಲೀಸರು

ಕೊಲೆ ಯತ್ನ ಆರೋಪಿ ಮೇಲೆ ಫೈರಿಂಗ್, ರೌಡಿಗಳಿಗೆ ನಡುಕ ಹುಟ್ಟಿಸಿದ ತುಮಕೂರು ಪೊಲೀಸರು.

 

 

ತುಮಕೂರು – ಕೊಲೆ ಯತ್ನ ಆರೋಪಿ ಮೇಲೆ ತುಮಕೂರು ಪೊಲೀಸರು ಗುಂಡು ಹಾರಿಸಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ.

 

 

ಕಳೆದ ನಾಲ್ಕು ದಿನಗಳ ಹಿಂದೆ ತುಮಕೂರು ನಗರದಲ್ಲಿ ನಡೆದ ಎರಡು ರೌಡಿ ಗುಂಪಿಗೆಗಳ ನಡುವೆ ಪರಸ್ಪರ ಹೊಡೆದಾಡಿಕೊಂಡು ಕೊನೆಗೆ ಇಬ್ಬರನ್ನು ಕೊಲೆ ಯತ್ನ ನಡೆದಿದ್ದು ಘಟನೆಗೆ ಸಂಬಂಧಿಸಿದಂತೆ ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನ ತುಮಕೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

 

 

 

ಇನ್ನು ಘಟನೆಗೆ ಸಂಬಂಧಿಸಿದಂತೆ ತುಮಕೂರು ನಗರ ಠಾಣೆ ಪೊಲೀಸರು ತನಿಖೆ ಕೈಗೆತ್ತಿಕೊಂಡು ಘಟನೆಗೆ ಕಾರಣರಾಗಿದ್ದ ಆರೋಪಿಗಳನ್ನು ವಶಕ್ಕೆ ಪಡೆದಿದ್ದರು.

 

 

ಇನ್ನು ಘಟನೆಯೆಲ್ಲಿ ಭಾಗಿಯಾಗಿದ್ದ ಆರೋಪಿ ಮನು ಅಲಿಯಾಸ್ ಮನೋಜ್ ಎಂಬ ತನ್ನನ್ನು ಸ್ಥಳ ಮಹಾಜರಿಗಾಗಿ ತುಮಕೂರು ನಗರ ಹೊರವಲಯದ ದಿಬ್ಬೂರು ಬಳಿ ಕರೆದುಕೊಂಡು ಹೋದ ಸಂದರ್ಭದಲ್ಲಿ ಪೊಲೀಸರ ಮೇಲೆ ಡ್ರ್ಯಾಗರ್ ನಿಂದ  ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಮುಂದಾಗಿದ್ದ.

 

 

 

 

 

 

ಇನ್ನು ಪೊಲೀಸರ ಎಚ್ಚರಿಕೆಯನ್ನು ಸಹ ಲೆಕ್ಕಿಸದೆ ಪೊಲೀಸ್ ಸಿಬ್ಬಂದಿ ಚೇತನ್ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾದ ಆರೋಪಿ ಮನೋಜ್ ಗೆ ಎಚ್ಚರಿಕೆ ನೀಡಿದ ಸಿಪಿಐ ದಿನೇಶ್ ಕುಮಾರ್ ಅವರು ಕೊನೆಗೆ ಆತ್ಮ ರಕ್ಷಣೆಗಾಗಿ ಆರೋಪಿ ಮನೋಜ್ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.

 

 

 

 

 

 

ಇನ್ನು ಘಟನೆಯಲ್ಲೇ ಗಾಯಗೊಂಡಿರುವ ಆರೋಪಿ ಮನೋಜ್ ತುಮಕೂರು ನಗರ ರೌಡಿ ಶೀಟರ್, ರೋಹಿತ್ ಅಲಿಯಾಸ್ ಕ್ಯಾಟ್ ಗ್ಯಾಂಗ್ನಲ್ಲಿ ಗುರುತಿಸಿಕೊಂಡಿದ್ದ.

 

 

 

 

 

 

ಇನ್ನು ರೌಡಿ ಮನೋಜ್ ಮೂಲತಃ ಆಂಧ್ರಪ್ರದೇಶ ಆಂಧ್ರ ಪ್ರದೇಶ ಜಿಲ್ಲೆಯ ಸತ್ಯಸಾಯಿ ಜಿಲ್ಲೆಯವನಾಗಿದ್ದು ತುಮಕೂರು ನಗರದ ಬಿಎಂ ಪಾಳ್ಯದಲ್ಲಿ ವಾಸವಾಗಿದ್ದ ಏನಲಾಗಿದೆ.

 

 

 

 

 

 

ಇನ್ನು ಪೊಲೀಸರು ಗುಂಡು ಹಾರಿಸಿದ ಸಂದರ್ಭದಲ್ಲಿ ಮತ್ತೋರ್ವ ಪೊಲೀಸ್ ಸಿಬ್ಬಂದಿ ಚೇತನ್ ಸಹ ಗಾಯಗೊಂಡಿದ್ದು ಗಾಯಗೊಂಡ ಪೊಲೀಸ್ ಸಿಬ್ಬಂದಿ ಚೇತನ್ ನನ್ನ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಘಟನೆಯಲ್ಲಿ ಗುಂಡೆಟು ತಿಂದಿರುವ ಆರೋಪಿ ಮನೋಜ್ ನನ್ನ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ.

 

 

 

 

 

ಇನ್ನು ಘಟನೆಯ ಸಂಬಂಧ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವಿ ರವರು ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

 

 

 

ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

Leave a Reply

Your email address will not be published. Required fields are marked *

You cannot copy content of this page

error: Content is protected !!