ಕಾಮಗಾರಿಗಳ ಪರಿಶೀಲನೆ ನಡೆಸಿದ ನಗರಾಭಿವೃದ್ಧಿ ಸಚಿವ -ಭೈರತಿ ಬಸವರಾಜ್. Minister byrathi basavaraj visit to Tumkur city.

ಕಾಮಗಾರಿಗಳ ಪರಿಶೀಲನೆ ನಡೆಸಿದ ನಗರಾಭಿವೃದ್ಧಿ ಸಚಿವ -ಭೈರತಿ ಬಸವರಾಜ್.

 

ಇಂದು ತುಮಕೂರು ನಗರಕ್ಕೆ ಭೇಟಿ ನೀಡಿದ ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ್ ರವರು ತುಮಕೂರು ನಗರದಲ್ಲಿ ಸಂಚರಿಸಿ ತುಮಕೂರು ಸ್ಮಾರ್ಟ್ ಸಿಟಿ, ತುಮಕೂರು ಮಹಾನಗರ ಪಾಲಿಕೆ ಹಾಗೂ TUDA ವತಿಯಿಂದ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅಧಿಕಾರಿ ವರ್ಗದಿಂದ ಪಡೆದರು. ಇನ್ನು ಸಚಿವರೇ ಕಾಮಗಾರಿಗಳ ಪರಿಶೀಲನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಾಸಕರಾದ ಜ್ಯೋತಿ ಗಣೇಶ್ ರವರು, ಮಹಾನಗರ ಪಾಲಿಕೆ ಕಮಿಷನರ್ ರೇಣುಕಾ ,ತುಮಕೂರು ಸ್ಮಾರ್ಟ್ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳು ಹಾಜರಿದ್ದು. ನಗರಾಭಿವೃದ್ಧಿ ಸಚಿವರಿಗೆ ಸಾಥ್ ನೀಡಿದರು. ವಿವಿಧ ಭಾಗಗಳಿಗೆ ಹಾಗೂ ತುಮಕೂರಿನ ಮಂಡಿ ಪೇಟೆಯ ಮಾರಿಯಮ್ಮ ನಗರದ ವಸತಿ ಸಮುಚ್ಚಯಕ್ಕೆ ಭೇಟಿ ನೀಡಿದ ಸಚಿವರು. ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಸಚಿವರು ಕಾಮಗಾರಿಯಲ್ಲಿ ಕಳಪೆ ಕಂಡುಬಂದಲ್ಲಿ ಸಂಬಂಧಪಟ್ಟವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುವ ಬಗ್ಗೆ ಎಚ್ಚರಿಕೆ ನೀಡಿದರು. ಹಲವು ಕಾಮಗಾರಿಗಳು ಮುಕ್ತಾಯ ಹಂತದಲ್ಲಿದ್ದು ಅವುಗಳನ್ನು ಶೀಘ್ರವಾಗಿ ಮುಗಿಸಿ ಸಾರ್ವಜನಿಕರಿಗೆ ಅನುವುಮಾಡಿಕೊಡಬೇಕು. ಕಳಪೆ ಕಾಮಗಾರಿಯ ಮೇಲೆ ಯಾವುದೇ ಮುಲಾಜಿಲ್ಲದೆ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!