ಜಾತ್ರೆಯಲ್ಲಿ ಕಲುಷಿತ ನೀರು ಸೇವನೆ ಇಬ್ಬರ ಸಾವು

ಜಾತ್ರೆಯಲ್ಲಿ ಕಲುಷಿತ ನೀರು ಸೇವನೆ ಇಬ್ಬರ ಸಾವು

 

ತುಮಕೂರು – ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಜಾತ್ರೆ ಮಹೋತ್ಸವ ನಡೆಯುತ್ತಿದ್ದು ಜಾತ್ರೆಯಲ್ಲಿ ಕಲುಷಿತ ನೀರು ಸೇವಿಸಿ ವಾಂತಿ, ಭೇದಿ, ನಿಶಕ್ತಿಯಿಂದ ಬಳಲಿ ಮಧುಗಿರಿ ತಾಲೂಕು ಆಸ್ಪತ್ರೆ, ತುಮಕೂರು ಜಿಲ್ಲಾ ಆಸ್ಪತ್ರೆ ಸೇರಿದಂತೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿ  ಹಲವರು ಚಿಕಿತ್ಸೆ ಪಡೆಯುತ್ತಿದ್ದು.

 

 

ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಚಿನ್ನೇನಹಳ್ಳಿ ಗ್ರಾಮದ ಪೆದ್ದಣ್ಣ (72) ಹಾಗೂ ಚಿಕ್ಕದಾಸಪ್ಪ (76) ಎನ್ನುವ ಇಬ್ಬರು ವಯೋವೃತ್ತರು ಚಿಕಿತ್ಸೆ ಫಲಕಾರಿಯಾಗದೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ .

 

 

ಇನ್ನು ಮೃತಪಟ್ಟ ಇಬ್ಬರ ಶವವನ್ನು ಜಿಲ್ಲಾ  ಆಸ್ಪತ್ರೆಯಲ್ಲಿ   ಇಡಲಾಗಿದ್ದು   ಮೃತಪಟ್ಟ ಇಬ್ಬರು ಚಿಕಿತ್ಸೆಗೆ ಸ್ಪಂಧಿಸುತ್ತಿದ್ದರು ಎನ್ನಲಾಗಿತ್ತು ಆದರೂ ಸಹ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಬುದುವಾರ ರಾತ್ರಿ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

 

 

 

 

ಇನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಯೋಗಕ್ಷೇಮವನ್ನ ಮಧುಗಿರಿ ಕ್ಷೇತ್ರದ ಶಾಸಕರು ಹಾಗೂ ಸಹಕಾರ ಸಚಿವರಾದ ಕೆ .ಎನ್ ರಾಜಣ್ಣ  ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಯೋಗಕ್ಷೇಮವನ್ನು ವಿಚಾರಿಸಿದರು.

 

 

ಆದರೂ ಸಹ ಚಿಕಿತ್ಸೆ ಫಲಿಸದೆ ಇಬ್ಬರು ಮೃತಪಟ್ಟಿದ್ದು ಆತಂಕಕ್ಕೆ ಈಡು ಮಾಡಿದೆ.

 

 

Leave a Reply

Your email address will not be published. Required fields are marked *

You cannot copy content of this page

error: Content is protected !!