ಬೈಕ್ ವೀಲಿಂಗ್ ಮಾಡುವ ವೇಳೆ ಅಡ್ಡ ಬಂದ ಯುವತಿಗೆ ಕಿರುಕುಳ, ರಕ್ಷಣೆಗೆ ಹೋದವನ ಮೇಲೆ ಮಚ್ಚಿನಿಂದ ಮರಣಾಂತಿಕ ಹಲ್ಲೆ. 

ಬೈಕ್ ವೀಲಿಂಗ್ ಮಾಡುವ ವೇಳೆ ಅಡ್ಡ ಬಂದ ಯುವತಿಗೆ ಕಿರುಕುಳ, ರಕ್ಷಣೆಗೆ ಹೋದವನ ಮೇಲೆ ಮಚ್ಚಿನಿಂದ ಮರಣಾಂತಿಕ ಹಲ್ಲೆ. 

 

 

ತುಮಕೂರು _ ಬೈಕ್ ವೀಲಿಂಗ್ ಮಾಡುವ ವೇಳೆ ಅಡ್ಡ ಬಂದ ಯುವತಿಗೆ ಗಲಾಟೆ ಮಾಡುತ್ತಿದ್ದನ್ನು ಪ್ರಶ್ನೆ ಸಿದ್ಧಕ್ಕೆ ಪುಂಡನೊಬ್ಬ ಯುವತಿಯ ಪರ ಮಾತನಾಡಿದ ವ್ಯಕ್ತಿಯ ಮೇಲೆ ಮಚ್ಚಿನಿಂದ ಮನಸೋ ಇಚ್ಛೆ ಹಲ್ಲೇ ನಡೆಸಿರುವ ಘಟನೆ ತುಮಕೂರು ನಗರದ ಮರಳೂರು ದಿಣ್ಣೆಯಲ್ಲಿ ನಡೆದಿದೆ.

 

 

 

ಇರ್ಫಾನ್ ಮಚ್ಚಿನಿಂದ ಹಲ್ಲೆ ನಡೆಸಿದ ಆರೋಪಿಯಾಗಿದ್ದು ಯುವತಿಯ ರಕ್ಷಣೆಗೆ ಮುಂದಾಗಿದ್ದ ಮತ್ತೋರ್ವ ಯುವಕನ ಮೇಲೆ ಹಲ್ಲೆ ಮಾಡಿದ್ದು.

 

 

ಹಲ್ಲೆಗೊಳಗಾಗಿರುವ ಯುವಕನ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಆರೋಪಿಗಳಿಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

 

 

 

ನಗರದ ಪ್ರಮುಖ ರಸ್ತೆಗಳಲ್ಲಿ ವೀಲಿಂಗ್ ಮಾಡುವ ಮೂಲಕ ಸಾರ್ವಜನಿಕರಿಗೆ ತೊಂದರೆ ಕೊಡುವ ಇರ್ಫಾನ್ ವೀಲಿಂಗ್ ಮಾಡುವ ಸಂದರ್ಭದಲ್ಲಿ ಯುವತಿ ಅಡ್ಡ ಬಂದಿದ್ದಕ್ಕೆ ಆಕೆಯನ್ನ ತಳ್ಳಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಚುಡಾಯಿಸಿದ್ದ ಆರೋಪಿ.

 

 

 

ಈ ವೇಳೆ ಯುವತಿಯ ರಕ್ಷಣೆಗೆ ಬಂದಿದ್ದ ಮತ್ತೋರ್ವ ಯುವಕ ಇರ್ಫಾನ್ ಹಾಗೂ ಸಾಧಿಕ್ ಆರೋಪಿಗೆ ಬೈದು ಬುದ್ಧಿ ಹೇಳಿದರು ಇದರಿಂದ ಕುಪಿತಗೊಂಡಿದ್ದ ಆರೋಪಿ ಇರ್ಫಾನ್ ತನ್ನ ಸ್ನೇಹಿತರೊಂದಿಗೆ ಬಂದು ಸಾಧಿಕ್ ಮೇಲೆ ಮನಸ್ಸು ಇಚ್ಛೆ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದು.

 

 

 

ತುಮಕೂರು ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪುಂಡರ ಹಾವಳಿ ಮಿತಿಮೀರಿದ್ದು ಇಂತಹ ಪುಂಡರ ಹಾವಳಿಗೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದ್ದು.

 

 

ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ .

Leave a Reply

Your email address will not be published. Required fields are marked *

You cannot copy content of this page

error: Content is protected !!