ಪೆನ್ನೊಬ್ಬ ಹಳ್ಳಿಯ ಶಿವ ಸಿದ್ದೇಶ್ವರ ದೇವಾಲಯದ ಅಭಿವೃದ್ಧಿಗೆ ಧರ್ಮಸ್ಥಳ ಸಂಘದ ವತಿಯಿಂದ ಒಂದು ಲಕ್ಷ ರೂಗಳು.

 

ಪಾವಗಡ ತಾಲೂಕು ಲಿಂಗದಹಳ್ಳಿ ಯ ವ್ಯಾಪ್ತಿಯ ಪೇನ್ನೊಬ್ಬ ಹಳ್ಳಿಯ ಶ್ರೀ ಶಿವ ಸಿದ್ದೇಶ್ವರ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗೆ ಧರ್ಮಸ್ಥಳ ಸಂಘದ ವತಿಯಿಂದ 1 ಲಕ್ಷ ರೂಪಾಯಿ ನೀಡಿದ್ದಾರೆ. ಧರ್ಮಸ್ಥಳದ ಶ್ರೀ ವೀರೇಂದ್ರ ಹೆಗಡೆಯವರ ಮುಂದಾಳತ್ವದಲ್ಲಿ ನಡೆದುಕೊಂಡು ಬರುತ್ತಿರುವ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದಗ್ರಾಮೀಣ ಭಾಗದಲ್ಲಿರುವ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯಕ್ರಮದಡಿಯಲ್ಲಿ ನಮ್ಮ ಊರು ನಮ್ಮ ಶ್ರದ್ದಾ ಕೇಂದ್ರದ ಅಡಿಯಲ್ಲಿ ಪೆನ್ನೋಬ ಹಳ್ಳಿಯ ಶಿವ ಸಿದ್ದೇಶ್ವರ ಸ್ವಾಮಿಯ ದೇವಸ್ಥಾನದ ಅಭಿವೃದ್ಧಿಗಾಗಿ ತುಮಕೂರು ಜಿಲ್ಲೆಯ ಧರ್ಮಸ್ಥಳ ಸಂಘದ ನಿರ್ದೇಶಕರಾದ ದಿನೇಶ್ ಪೂಜಾರಿಯವರು ದೇವಸ್ಥಾನದ ಸಂಘದ ಪದಾಧಿಕಾರಿಗಳಿಗೆ ಒಂದು ಲಕ್ಷ ರೂಗಳ ಚೆಕ್ ವಿತರಿಸುವ ಮೂಲಕ ಗ್ರಾಮದಲ್ಲಿರುವ ದೇವಸ್ಥಾನದ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಧರ್ಮಸ್ಥಳ ಸಂಘದ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳ್ಳುತ್ತಿದೆ ಅದರಂತೆ ಗ್ರಾಮ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳ ಜೀರ್ಣೋದ್ಧಾರವು ಯಶಸ್ವಿಯಾಗಿ ನಡೆದುಕೊಂಡು ಬರುತ್ತಿದೆ. ಇನ್ನು ಧರ್ಮಸ್ಥಳ ಸಂಘದ ನಿರ್ದೇಶಕರಾದ ದಿನೇಶ್ ಪೂಜಾರಿ ಅವರು ಮಾತನಾಡಿ ನಮ್ಮ ಧರ್ಮಸ್ಥಳ ಸಂಘದ ವತಿಯಿಂದ ಹಲವು ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗಳ ಸಹಕಾರಿಯಾಗಿದ್ದು ಇದನ್ನು ಸದುಪಯೋಗಪಡಿಸಿ ಕೊಳ್ಳಬೇಕೆಂದು ತಿಳಿಸಿದರು.

Leave a Reply

Your email address will not be published. Required fields are marked *

You cannot copy content of this page

error: Content is protected !!