ಕಾಂಗ್ರೆಸ್ ಹಿರಿಯ ಮುಖಂಡ ಶಫಿ ಅಹಮದ್ ಮನೆಗೆ ಜೆಡಿಎಸ್ ರಾಜ್ಯ ಅಧ್ಯಕ್ಷ ಸಿಎಂ ಇಬ್ರಾಹಿಂ ಭೇಟಿ.

ಕಾಂಗ್ರೆಸ್ ಹಿರಿಯ ಮುಖಂಡ ಶಫಿ ಅಹಮದ್ ಮನೆಗೆ ಜೆಡಿಎಸ್ ರಾಜ್ಯ ಅಧ್ಯಕ್ಷ ಸಿಎಂ ಇಬ್ರಾಹಿಂ ಭೇಟಿ.

 

 

ತುಮಕೂರು – ತುಮಕೂರು ನಗರದ ಹಿರಿಯ ಕಾಂಗ್ರೆಸ್ ಮುಖಂಡ ಶಾಫಿ ಅಹಮದ್ ರವರ ಮನೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಭೇಟಿ ನೀಡಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಎನ್ ಗೋವಿಂದರಾಜುರವರಿಗೆ ಬೆಂಬಲ ನೀಡಲು ಮನವಿ ಮಾಡಿದರು.

 

ಇತ್ತೀಚೆಗೆ ಕಾಂಗ್ರೆಸ್ ಪಕ್ಷದಿಂದ ತಮ್ಮ ಅಳಿಯ ಹಾಗೂ ಮಾಜಿ ಶಾಸಕ ಡಾಕ್ಟರ್ ರಫೀಕ್ ಅಹಮದ್ ರವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ದೊರೆಯಲಿದೆ ಎನ್ನುವ ವಿಶ್ವಾಸದಲ್ಲಿ ಇದ್ದ ಮಾಜಿ ಶಾಸಕ ಶಫಿ ಅಹಮದ್ ಹಾಗೂ ರಫೀಕ್ ಅಹಮದ್ ಇದ್ದರು ಆದರೆ ಕೊನೆಗಳಿಗೆಯಲ್ಲಿ  ಕಾಂಗ್ರೆಸ್ ಪಕ್ಷದಿಂದ ಇಕ್ಬಾಲ್ ಅಹಮದ್ ರವರಿಗೆ ಟಿಕೆಟ್ ಘೋಷಣೆ ಆದ ಬೆನ್ನಲ್ಲೇ ತುಮಕೂರು ನಗರ ಕಾಂಗ್ರೆಸ್ ಪಾಳ್ಯದಲ್ಲಿ ಬಂಡಾಯದ ಬಾವುಟ ಹಾರಿಸಿದ್ದ ಶಫಿ ಅಹಮದ್ ರವರು ಹಾಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್ ರವರೊಂದಿಗೆ ಯಾವುದೇ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೆ ದೂರ ಉಳಿದಿದ್ದರೂ.

 

 

 

 

ಇನ್ನು ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ವಾರ್ಡ್ ಸಭೆಯಲ್ಲೂ ಸಹ ಹಲವು ಮುಖಂಡರು ಶಫಿ ಹಾಗೂ ರಫೀಕ್ ಅಹಮದ್ ರವರ ನಡೆಗೆ ತೀವ್ರ ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ಸೋಮವಾರ ದಿಡೀರ್ ಎಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಶಫಿ ಅಹಮದ್ ರವರ ಮನೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ  ಭೇಟಿ ನೀಡಿ ಜೆಡಿಎಸ್ ಅಭ್ಯರ್ಥಿಯ ಪರ ಬೆಂಬಲ ನೀಡಲು ಮನವಿ ಮಾಡಿದ್ದು ಶಫಿ ಅಹಮದ್ ಹಾಗೂ ರಫೀಕ್ ಅಹಮದ್ ರವರ ನಡೆ ಈಗ ಯಾರ ಕಡೆ ಎನ್ನುವ ಪ್ರಶ್ನೆ ಹುಟ್ಟು ಹಾಕಿದ್ದು.

 

 

 

ಈ ಎಲ್ಲಾ ಬೆಳವಣಿಗೆಯಿಂದ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್ ರವರು ಸಹ ಗೊಂದಲದಲ್ಲಿದ್ದು ಇನ್ನು ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್ ರವರು ಸಹ ಶಫಿ ಹಾಗೂ ರಫಿಕ್  ಅಹಮದ್  ರವರ ಮನೆಗೆ ಭೇಟಿ ನೀಡಿ ಬೆಂಬಲ ನೀಡಲು ಮನವಿ ಮಾಡಿದರು ಆದರೂ ಸಹ ಇಬ್ಬರು ನಾಯಕರು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ಮುಂದಾಗದೆ ಇದ್ದು ಈ ಎಲ್ಲಾ ಬೆಳವಣಿಗೆಗಳಿಂದ ಇಬ್ಬರು ನಾಯಕರು ಯಾರಿಗೆ ಬೆಂಬಲ ನೀಡಲಿದ್ದಾರೆ ಎನ್ನುವುದನ್ನು ಮುಂದಿನ ದಿನದಲ್ಲಿ ಕಾದು ನೋಡಬೇಕಿದೆ.

 

 

ಇದೇ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಜೆಡಿಎಸ್ ಘಟಕದ ಅಧ್ಯಕ್ಷ ಆರ್‌ಸಿ ಆಂಜಿನಪ್ಪ, ತುಮಕೂರು ಜಿಲ್ಲಾ ಜೆಡಿಎಸ್ ಅಭ್ಯರ್ಥಿ ಎನ್ ಗೋವಿಂದರಾಜು, ಪಾವಗಡ ಶ್ರೀರಾಮ್ ಇಸ್ಮಾಯಿಲ್ ಸೇರಿದಂತೆ ಸ್ಥಳೀಯ ಮುಖಂಡರು ಹಾಜರಿದ್ದರು.

 

Leave a Reply

Your email address will not be published. Required fields are marked *

You cannot copy content of this page

error: Content is protected !!