ಮಧುಗಿರಿಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಲಿದ್ದಾರೆ : ಕೆ.ಎನ್.ಆರ್.

ಮಧುಗಿರಿಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಲಿದ್ದಾರೆ : ಕೆ.ಎನ್.ಆರ್.

 

ತುಮಕೂರು : ಜಿಲ್ಲೆಯ ಮಧುಗಿರಿ ಕ್ಷೇತ್ರದ ಮಾಜಿ ಶಾಸಕರಾಗಿರುವ ಮತ್ತು ಹಾಲಿ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರು, ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡರಾಗಿರುವ ಕೆ.ಎನ್.ರಾಜಣ್ಣನವರು ದಿನಾಂಕ 07-03-2021ರಂದು ಭಾನುವಾರ ಮಧುಗಿರಿ ನಗರದ ರಾಜೀವ್ ಗಾಂಧೀ ಕ್ರೀಡಾಂಗಣದಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಂತ್ರಿ & ಹಾಲಿ ವಿರೋಧ ಪಕ್ಷದ ನಾಯಕರಾದ ಸಿದ್ಧರಾಮಯ್ಯ, ಜಿಲ್ಲೆಯ ಪ್ರಭಾವಿಗಳಾದ ಡಾ. ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ, ವೆಂಕಟರವಣಪ್ಪ, ರಫೀಕ್ ಅಹಮ್ಮದ್, ಷಫೀ ಅಹಮ್ಮದ್, ಎಸ್.ಪಿ.ಮುದ್ದಹನುಮೇಗೌಡ ಸೇರಿದಂತೆ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಮುಖಂಡರನ್ನು ಒಂದೇ ವೇದಿಕೆಯಲ್ಲಿ ಸಜ್ಜು ಮಾಡಲಿದ್ದಾರೆ ಕೆ.ಎನ್.ಆರ್.

 

ಈ ಕುರಿತು ಸುದ್ಧಿಗೋಷ್ಠಿ ಮಾಡಿದ ಕೆ.ಎನ್.ಆರ್. ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಿ, ಮುನ್ನಡೆಸುವುದಾಗಿಯೂ ಅಲ್ಲದೇ ಈ ಸಮಾವೇಶದಲ್ಲಿ ಮಧುಗಿರಿ ತಾಲ್ಲೂಕಿನಲ್ಲಿ ಒಟ್ಟು ೩೨ ಗ್ರಾಮ ಪಂಚಾಯಿತಿ ಕ್ಷೇತ್ರಗಳಲ್ಲಿದ್ದು ಅವುಗಳಲ್ಲಿ ೨೮ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅಧ್ಯಕ್ಷರು & ಉಪಾಧ್ಯಕ್ಷರಾಗಿ ಆಯ್ಕೆಯಾಗಿ ಪಂಚಾಯಿತಿಗಳ ಅಧಿಕಾರವನ್ನು ಹೊಂದಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಎಲ್ಲಾ ಅಭ್ಯರ್ಥಿಗಳು ಅಂದರೆ ಸ್ಪರ್ಧಿಸಿ ಗೆದ್ದಂತಹ ಮತ್ತು ಸೋತಂತಹ ಅವರಿಗೆ ಸನ್ಮಾನ ಸಮಾರಂಭವನ್ನೂ ಸಹ ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಮುಂದುವರೆದು ಮಾತನಾಡುತ್ತಾ ತುಮಕೂರು ಜಿಲ್ಲೆಯಲ್ಲಿರುವ ಎಲ್ಲಾ ವಿ.ಎಸ್.ಎಸ್.ಎನ್. ಸದಸ್ಯರ ಮಕ್ಕಳು, ಹಾಲಿನ ಡೈರಿ ಸದಸ್ಯರ ಮಕ್ಕಳು, ಡಿ.ಸಿ.ಸಿ. ಬ್ಯಾಂಕ್ ಸದಸ್ಯರ ಮಕ್ಕಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ತಮ್ಮ ಡಿ.ಸಿ.ಸಿ. ಬ್ಯಾಂಕ್ ವತಿಯಿಂದ ನೀಡಲು ಮುಂದಾಗಿದ್ದು, ಆ ಕುರಿತು ಚರ್ಚೆಗಳನ್ನು ನಡೆಸುತ್ತಿದ್ದು, ಮುಂಬರುವ ಜೂನ್ ಮಾಹೆಯೊಳಗೆ ಇದನ್ನು ಕಾರ್ಯರೂಪಕ್ಕೆ ತರುವುದಾಗಿ ತಿಳಿಸಿದರು.

Leave a Reply

Your email address will not be published. Required fields are marked *

You cannot copy content of this page

error: Content is protected !!