ಚಿರತೆ ದಾಳಿ: ಬಾಲಕಿಗೆ ಗಂಭೀರ ಗಾಯ 

ಚಿರತೆ ದಾಳಿ: ಬಾಲಕಿಗೆ ಗಂಭೀರ ಗಾಯ 

ಹನೂರು :- ತಾಲೂಕಿನ ಅರಣ್ಯ ಪ್ರದೇಶದ ಸಮೀಪದಲ್ಲಿರುವ ಚಿಕ್ಕಮಾಲಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕಗ್ಗಲಿ ಗುoದಿ ಗ್ರಾಮದಲ್ಲಿ ಸೋಮವಾರ ರಾತ್ರಿ ಬಾಲಕಿಯ ಮೇಲೆ ಚಿರತೆ ದಾಳಿ ಮಾಡಿದೆ.

 

 

 

 

ಕಗ್ಗಲಿಗುಂದಿ ಗ್ರಾಮದಲ್ಲಿ ಸೋಮವಾರ ರಾತ್ರಿ ವೇಳೆಯಲ್ಲಿ ಮನೆ ಮುಂಭಾಗದಲ್ಲಿ ಕುಳಿತಿದ್ದ ಆರೆಳು ವರ್ಷದ ಬಾಲಕಿಯ ಮೇಲೆ ಚಿರತೆಯೊಂದು ದಾಳಿ ಮಾಡಿದೆ.

 

 

 

 

 

 

 

 

 

 

 

 

ಸಮೀಪದಲ್ಲಿದ್ದ ಬಾಲಕಿಯ ತಂದೆಯ ಕಿರುಚಾಟದಿಂದ ಚಿರತೆಯೂ ಅಲ್ಲಿಂದ ಕಾಲ್ಕಿತ್ತಿದೆ. ನಂತರ ಸಮೀಪದಲ್ಲಿರುವ ಕಾಮಗೆರೆ ಹೋಲಿ ಕ್ರಾಸ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಬಾಲಕಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ.

 

 

 

 

 

 

 

 

 

 

ಇತ್ತೀಚಿಗೆ ಕಾಡಂಚಿನ ಗ್ರಾಮಗಳಲ್ಲಿ ಮನುಸ್ಯರ ಮೇಲೆ ಚಿರತೆ ಮತ್ತು ಆನೆ ದಾಳಿಗಳು ಹೆಚ್ಚಾಗಿ ನಡೆಯುತ್ತಿದ್ದು ಅರಣ್ಯ ಸಮೀಪದಲ್ಲಿ ಇರುವ ಗ್ರಾಮಗಳಿಗೆ ಅರಣ್ಯ ಇಲಾಖೆ ಇಂತಹ ದಾಳಿಗಳನ್ನು ತಡೆಯುವ ನಿಟ್ಟಿನಲ್ಲಿ ಸೂಕ್ತ ವ್ಯವಸ್ಥೆ ಮಾಡುವ ಕೆಲಸ ಮಾಡಬೇಕಿದೆ.

ವರದಿ :-ನಾಗೇಂದ್ರ ಪ್ರಸಾದ್

Leave a Reply

Your email address will not be published. Required fields are marked *

You cannot copy content of this page

error: Content is protected !!