ಬಿದಲೂರು ಗ್ರಾಮಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೇಸ್ ಅಧ್ಯಕ್ಷ ಮತ್ತು ಉಪಾಧ್ಯಕ್ಷೆ ಜಯಭೇರಿ 

ಬಿದಲೂರು ಗ್ರಾಮಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೇಸ್ ಅಧ್ಯಕ್ಷ ಮತ್ತು ಉಪಾಧ್ಯಕ್ಷೆ ಜಯಭೇರಿ 

ದೇವನಹಳ್ಳಿ: ತಾಲ್ಲೂಕಿನ ಬಿದಲೂರು ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ನೂತನ ಅಧ್ಯಕ್ಷರಾಗಿ ಎಸ್.ಪಿ ಮುನಿರಾಜು ಮತ್ತು ಉಪಾಧ್ಯಕ್ಷೆಯಾಗಿ ಅನುರಾಧ ಜಯಭೇರಿ ಬಾರಿಸಿದ್ದಾರೆ.

 

ಬಿದಲೂರು ಗ್ರಾಮ ಪಂಚಾಯಿತಿಯು ಒಟ್ಟು 18 ಸದಸ್ಯರನ್ನು ಒಳಗೊಂಡಿದ್ದು,10 ಸದಸ್ಯರು ಕಾಂಗ್ರೇಸ್ ಅಧ್ಯಕ್ಷ ಸ್ಥಾನಕ್ಕೆ ಬೆಂಬಲಿಸುವುದರ ಮೂಲಕ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾಧಿಕಾರಿಗಳು ಪ್ರಕಟಿಸಿದರು.

 

ಬಿದಲೂರು ನೂತನ ಅಧ್ಯಕ್ಷರು ಎಸ್.ಪಿ.ಮುನಿರಾಜು ಮಾತನಾಡಿ

ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ತಿಳಿಸಿದ ಅವರು ಪಕ್ಷದ ಮುಖಂಡರು ಹಿರಿಯರು ಮತ್ತು ಕಾರ್ಯಕರ್ತರ ಸಹಕಾರದಿಂದ ಉತ್ತಮ ಅವಕಾಶ ಸಿಕ್ಕಿದೆ. ಅಧ್ಯಕ್ಷ ಸ್ಥಾನದಲ್ಲಿ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದರು.

 

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಆನಂದ್ ಕುಮಾರ್, ಚಿನ್ನಪ್ಪ, ಕೆ.ಸಿ ಮಂಜುನಾಥ್, ಶ್ರೀನಿವಾಸ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

 

ವರದಿ : ಮಂಜು ಬೂದಿಗೆರೆ

9113813926

Leave a Reply

Your email address will not be published. Required fields are marked *

You cannot copy content of this page

error: Content is protected !!