ಕಾರಿನಲ್ಲಿ ಸುಟ್ಟ ಮೃತ ದೇಹಗಳು ತುಮಕೂರಿನಲ್ಲಿ ಘಟನೆ.
ತುಮಕೂರು – ಕೆರೆಯ ಅಂಗಳದಲ್ಲಿ ಕಾರೊಂದು ಸುಟ್ಟಿದ್ದು ಕಾರಿನಲ್ಲಿ ಮೂವರು ಮೃತದೇಹಗಳು ಪತ್ತೆಯಾಗಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ.
ತುಮಕೂರು ತಾಲೂಕಿನ ಕೋರ ಹೋಬಳಿಯ ಕುಚ್ಚಂಗಿ ಕೆರೆಯಲ್ಲಿ ಮೃತದೇಹಗಳು ಪತ್ತೆಯಾಗಿದ್ದು ಇನ್ನು ಸುಟ್ಟ ಕಾರಿನಲ್ಲಿ ಮೂರು ಮೃತದೇಹಗಳು ಪತ್ತೆಯಾಗಿವೆ.
ಇನ್ನು ಸುಟ್ಟ ಕಾರು ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಪಟ್ಟದ್ದು ಕಾರು ಸಂಪೂರ್ಣ ಸುಟ್ಟು ಹೋಗಿದ್ದು ಇಂದು ಸಾರ್ವಜನಿಕರು ಕೆರೆಗೆ ಭೇಟಿ ನೀಡಿದಾಗ ಘಟನೆ ಬೆಳಕಿಗೆ ಬಂದಿದ್ದು.
ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳಾದ ಎಸ್. ಪಿ ಅಶೋಕ್ ಕೆ ವಿ ಅಡಿಷನಲ್ ಎಸ್ಪಿ ಮರಿಯಪ್ಪ, ಡಿವೈಎಸ್ಪಿ ಚಂದ್ರಶೇಖರ್ ಸೇರಿದಂತೆ ಹಲವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಸ್ಥಳಕ್ಕೆ ಶ್ವಾನದಳ ಹಾಗೂ ಎಫ್ ಎಸ್ ಎಲ್ ತಂಡ ಭೇಟಿ
ಇನ್ನು ಘಟನೆ ಸಂಭಂದ ಪೊಲೀಸರು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸುತ್ತಿದ್ದು ಕಾರಿನಲ್ಲಿ ಪತ್ತೆಯಾಗಿರುವ ಮೃತದೇಹಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ