ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ತುಮಕೂರು ಜಿಲ್ಲೆಯಲ್ಲಿ ಪ್ರಯಾಣಿಕರ ಪರದಾಟ.

 

 

 

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ತುಮಕೂರು ಜಿಲ್ಲೆಯಾದ್ಯಂತ ಪ್ರಯಾಣಿಕರ ಪರದಾಟ.

 

ತುಮಕೂರು ಜಿಲ್ಲಾಡಳಿತದ ವತಿಯಿಂದ ಪ್ರಯಾಣಿಕರಿಗೆ ತೊಂದರೆಯಾಗದ ರೀತಿಯಲ್ಲಿ ಖಾಸಗಿ ಬಸ್ಗಳ ಸಂಚಾರದ ನಡುವೆಯೂ ತುಮಕೂರು ಜಿಲ್ಲೆಯಾದ್ಯಂತ ಪ್ರಯಾಣಿಕರು ತಮ್ಮ ಊರುಗಳತ್ತ ಪರದಾಟ ಪಡುತ್ತಿದ್ದಾರೆ.

 

ತುಮಕೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳ ಸಂಚಾರ ಮಾಡಿದರು ಕೆಲ ಖಾಸಗಿ ಬಸ್ ಮಾಲೀಕರು ಹೆಚ್ಚಿನ ಹಣ ಬೇಡಿಕೆಯಿಟ್ಟು ಸಾರ್ವಜನಿಕರನ್ನು ಕರೆದೊಯ್ಯುತ್ತಿರುವುದು ಕಂಡುಬಂದಿದೆ.

 

ಮುಷ್ಕರ ಹಿನ್ನೆಲೆ ತಮ್ಮ ಸ್ವಂತ ಸ್ಥಳಗಳತ್ತ ತೆರಳಲು ಹಾಗೂ ಹೊರಜಿಲ್ಲೆಗಳಿಂದ ತುಮಕೂರಿಗೆ ಆಗಮಿಸುವ , ಹಾಗೂ ಹೊರ ಜಿಲ್ಲೆಗಳಿಗೆ ಪ್ರಯಾಣ ಬೆಳೆಸಲು ಸಾರ್ವಜನಿಕರ ಹಾಗೂ ಪ್ರಯಾಣಿಕರು ಪರದಾಡುತ್ತಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!