ಕುಡುಕರ ಅಡ್ದವಾದ ಸರ್ಕಾರಿ ಶಾಲೆ ಆವರಣ

 

ತುಮಕೂರು ಜಿಲ್ಲೆ,ಗುಬ್ಬಿ ತಾಲೂಕು ಕಸಬಾ ಹೋಬಳಿ ಕೆ.ಜಿ.ಟೆಂಪಲ್ ನ ನಾಗಸಂದ್ರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಬೀಗ ಮುರಿದು ಶಾಲೆಯ ಆವರಣದಲ್ಲಿ ದುಷ್ಕರ್ಮಿಗಳು ಮದ್ಯ ಸೇವಿಸಿ ಮದ್ಯದ ಬಾಟಲ್ ಗಳನ್ನು ಎಸೆದು ಹೂವಿನ ಕುಂಡಗಳನ್ನು ಒಡೆದು ಹಾಕಿದ ಘಟನೆ ನೆನ್ನೆ ನಡೆದಿದೆ.

ಇಂದು ಅಂಬೇಡ್ಕರ್ ಜಯಂತಿ ಆಚರಣೆಗಾಗಿ ಶಾಲೆಗೆ ಬಂದ ಶಿಕ್ಷಕರು ಮತ್ತು ವಿಧ್ಯಾರ್ಥಿಗಳನ್ನು ಸ್ವಾಗತಿಸಿದ್ದು ಮದ್ಯದ ಬಾಟಲಿಗಳು ನಾಗಸಂದ್ರ ಸರ್ಕಾರಿ ಶಾಲೆಯ ಆವರಣದಲ್ಲಿ ಪುಂಡರು ಅನೈತಿಕ ಚಟುವಟಿಕೆಯ ತಾಣವಾಗಿದ್ದು ಈ ರೀತಿಯ ಘಟನೆಗಳು ಪದೇಪದೇ ಮರುಕಳಿಸುತ್ತಿದೆ ಎಂದು ಶಿಕ್ಷಕರು ಮತ್ತು ಶಾಲಾ ಅಭಿವೃದ್ಧಿ ಸಮಿತಿ ಸದಸ್ಯ ಗೌಸ್ ಪೀರ್ ಅರೋಪಿದ ಅವರು ಪೊಲೀಸ್ ಇಲಾಖೆಗೆ ಬಹಳಷ್ಟು ಬಾರಿ ಮೌಕಿಕವಾಗಿ ದೂರು ನೀಡಿದ್ದರು ಏನು ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

 

 

 

ಅದೇನೇ ಇರಲಿ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಲು ಇರುವ ಸರ್ಕಾರಿ ಶಾಲೆಯನ್ನು ಕುಡುಕರು ತಮ್ಮ ಅಡ್ಡ  ಮಾಡಿಕೊಂಡಿರುವುದು ನಿಜಕ್ಕೂ ಖಂಡನೀಯ ಇನ್ನಾದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕೂಡಲೇ ಎಚ್ಚೆತ್ತು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ

Leave a Reply

Your email address will not be published. Required fields are marked *

You cannot copy content of this page

error: Content is protected !!