ತುಮಕೂರಿನ ಇಬ್ಬರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಅಪಘಾತದಲ್ಲಿ ದುರ್ಮರಣ .

 

ಅಡ್ಡಬಂದ ನಾಯಿಯನ್ನು ತಪ್ಪಿಸಲು ಹೋದ ಕಾರಿನ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ಬಳಿಯ ತಾಳೆಕೆರೆ ಹ್ಯಾಂಡ್ ಪೋಸ್ಟ್ ಬಳಿ ನಡೆದಿದ್ದು.

 

ಮೃತರನ್ನು ತುಮಕೂರಿನ ಉದಯಕುಮಾರ್ 28 ಹಾಗೂ ಪವನ್ 28 ಎಂದು ಗುರುತಿಸಲಾಗಿದ್ದು. ಮೃತಪಟ್ಟ ಇಬ್ಬರೂ ಕೂಡ ತುಮಕೂರಿನ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳ ಆಗಿದ್ದಾಗಿ ತಿಳಿದು ಬಂದಿದೆ.

ಮೃತಪಟ್ಟ ಉದಯಕುಮಾರ್ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದ್ದು ಘಟನೆಯಲ್ಲಿ ಪವನ್ ಹಾಗೂ ಉದಯ್ ಸ್ಥಳದಲ್ಲೇ ಮೃತಪಟ್ಟರೆ ಹಿಂಬದಿ ಕುಳಿತಿದ್ದ ಮಣಿ ಎಂಬ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ನೆಲಮಂಗಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಕನ್ನಡ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ

One thought on “ತುಮಕೂರಿನ ಇಬ್ಬರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಅಪಘಾತದಲ್ಲಿ ದುರ್ಮರಣ .

Leave a Reply

Your email address will not be published. Required fields are marked *

You cannot copy content of this page

error: Content is protected !!