ಹಾಸನದಲ್ಲಿ ಮಂಗಗಳ ಮಾರಣಹೋಮ ಮಾಸುವ ಮೊದಲೇ ಶಿವಮೊಗ್ಗದಲ್ಲೂ ದಾರುಣ ಘಟನೆ; 150 ನಾಯಿಗಳ ಜೀವಂತ ಸಮಾಧಿ

ಹಾಸನದಲ್ಲಿ ಮಂಗಗಳ ಮಾರಣಹೋಮ ಮಾಸುವ ಮೊದಲೇ ಶಿವಮೊಗ್ಗದಲ್ಲೂ ದಾರುಣ ಘಟನೆ; 150 ನಾಯಿಗಳ ಜೀವಂತ ಸಮಾಧಿ

ಶಿವಮೊಗ್ಗ: ಹಾಸನ ಜಿಲ್ಲೆಯಲ್ಲಿ ಮಂಗಗಳ ಸಾಮೂಹಿಕ ಹತ್ಯೆ ಪ್ರಕರಣ ಮಾಸುವ ಮೊದಲೇ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ 150ಕ್ಕೂ ಹೆಚ್ಚು ನಾಯಿಗಳನ್ನು ಜೀವಂತವಾಗಿ ಸಮಾಧಿ ಮಾಡಿದ ಘಟನೆ ನಡೆದಿದೆ.

 

ಭದ್ರಾವತಿ ತಾಲೂಕಿನ ಕಂಬದಾಳು ಹೊಸೂರು ಗ್ರಾಮ ಪಂಚಾಯಿತಿಯ ರಂಗನಾಥಪುರದಲ್ಲಿ 150ಕ್ಕೂ ಹೆಚ್ಚು ನಾಯಿಗಳನ್ನು ಜೀವಂತವಾಗಿ ಸಮಾಧಿ ಮಾಡಲಾಗಿದೆ

ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ತಮ್ಮಡಿಹಳ್ಳಿಯಲ್ಲಿ ಘಟನೆ ನಡೆದಿದೆ.

ಪ್ರಾಣಿ ದಯಾ ಸಂಘದವರು ಪರಿಶೀಲನೆ ನಡೆಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಗೆ ಪ್ರಾಣಿಗಳ ಸಂಘದಿಂದ ದೂರು ನೀಡಲಾಗಿದೆ. ಬೀದಿನಾಯಿಗಳ ಕಾಟ ಹೆಚ್ಚಾಗಿದ್ದರೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಸಂತಾನ ಹರಣ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತದೆ. ಆದರೆ, ಜೀವಂತವಾಗಿ 150 ನಾಯಿಗಳ ಸಮಾಧಿ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!