ಕಾಂಗ್ರೆಸ್ ಹಾಗೂ ಹೆಚ್ ಡಿ ಕುಮಾರಸ್ವಾಮಿ ತಾಲಿಬಾನಿಗಳು_ ರೇಣುಕಾಚಾರ್ಯ.

ಕಾಂಗ್ರೆಸ್ ಹಾಗೂ ಹೆಚ್ ಡಿ ಕುಮಾರಸ್ವಾಮಿ ತಾಲಿಬಾನಿಗಳು_ ರೇಣುಕಾಚಾರ್ಯ.

ಕಾಂಗ್ರೆಸ್ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರವರು ತಾಲಿಬಾನಿಗಳಂತೆ ವರ್ತಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ರವರು ತುಮಕೂರಿನಲ್ಲಿ ತಿಳಿಸಿದರು ನಮ್ಮ ದೇಶ ಹಾಗೂ ಸಂಸ್ಕೃತಿ ರಕ್ಷಣೆ ಹಾಗೂ ಉಳಿವಿನ ನಿಟ್ಟಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಭಾರತೀಯ ಜನತಾ ಪಕ್ಷ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

 

ಇನ್ನು ಡಿಕೆ ಶಿವಕುಮಾರ್ ರವರ ತುಘಲಕ್ ದರ್ಬಾರ್ ಬಗ್ಗೆ ನನಗೂ ತಿಳಿದಿದೆ ಇನ್ನು ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಸಂಪುಟದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದಾಗ ಡಿಕೆ ಶಿವಕುಮಾರ್ ಅವರು ದೌರ್ಜನ್ಯ ಮಾಡಿಲ್ಲವಾ…..?

ಎಂದು ಪ್ರಶ್ನಿಸಿದರು ಇನ್ನು ಮಂತ್ರಿ ಆದ ಮೇಲೆ ಎಷ್ಟು ದೌರ್ಜನ್ಯ ಮಾಡಿದ್ದಾರೆ ಎಂದು ನಮಗೂ ತಿಳಿದಿದೆ ಎಂದು ಡಿಕೆ ಶಿವಕುಮಾರ್ ಅವರಿಗೆ ಟಾಂಗ್ ನೀಡಿದ್ದಾರೆ.

 

 

ಹಾಗಾಗಿ ಕಾಂಗ್ರೆಸ್ ಹಾಗೂ ಎಚ್ ಡಿ ಕುಮಾರಸ್ವಾಮಿ ಅವರು ಇತ್ತೀಚಿನ ದಿನಗಳಲ್ಲಿ ತಾಲಿಬಾನಿಗಳಂತೆ ವರ್ತಿಸುತ್ತಿದ್ದು ಅದಕ್ಕೆ ದೇಶ ಹಾಗೂ ರಾಜ್ಯದ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದರು.

 

ಕುಮಾರಸ್ವಾಮಿ ರವರ ಆರೆಸ್ಸೆಸ್ ಬಗ್ಗೆ ನೀಡಿರುವ ಹೇಳಿಕೆ ಖಂಡಿಸಿದ ರೇಣುಕಾಚಾರ್ಯ

 

 

ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಂದಾಗಿನಿಂದ ರಾಜ್ಯದ ಜನತೆ ನೆಮ್ಮದಿಯಿಂದ ಇದ್ದಾರೆ ಇನ್ನು ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಗಲಬೆಗಳು ಆಗಿದ್ದವು ಇದುವರೆಗೂ ನಮ್ಮ ಅವಧಿಯಲ್ಲಿ ಯಾವುದೇ ಗಲಭೆ ಆಗಿಲ್ಲ ಅವರ ಆಡಳಿತ ಅವಧಿಯಲ್ಲಿ ಎಷ್ಟು ಕೋಮುಗಲಬೆ ಆಗಿದೆ ನೆನಪಿದೆಯಾ ಎಂದು ಪ್ರಶ್ನೆ ಮಾಡಿದರು.

 

ಇನ್ನು ಬಿಜೆಪಿ ಹಾಗೂ ಆರೆಸ್ಸೆಸ್ ದೀಪದ ಸಂಕೇತ ಇನ್ನೂ ದೀಪ ಎಷ್ಟು ಪ್ರಜ್ವಲಿಸುತ್ತಾ ಹಾಗೆ ದೇಶದ ಸಂಸ್ಕೃತಿಯನ್ನು ಆರೆಸ್ಸೆಸ್ ಉಳಿಸಿಕೊಂಡು ಬರುತ್ತಿದೆ ಆರೆಸ್ಸೆಸ್ ಬೆಂಕಿ ಹಚ್ಚುವ ಕೆಲಸ ಮಾಡಿಲ್ಲ. ಇನ್ನು ವೋಟಿನ ರಾಜಕಾರಣಕ್ಕಾಗಿ ಅವರು ಬೆಂಕಿ ಹಚ್ಚುವ ಕೆಲಸವನ್ನು ಮಾಡುತ್ತಾರೆ ಬಿಜೆಪಿ ಹಾಗೂ ಆರೆಸ್ಸೆಸ್ ಯಾವತ್ತೂ ದೇಶ ಹಾಗೂ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿಲ್ಲ ಎಂದು ತಿಳಿಸಿದರು

Leave a Reply

Your email address will not be published. Required fields are marked *

You cannot copy content of this page

error: Content is protected !!