೧೦೦ಕೋಟಿ ಕೋವಿಡ್ ಲಸಿಕೆ ನೀಡಿ ದಾಖಲೆ ರೈತಮೊರ್ಚಾ ವತಿಯಿಂದ ಅಭಿನಂದನೆ  

೧೦೦ಕೋಟಿ ಕೋವಿಡ್ ಲಸಿಕೆ ನೀಡಿ ದಾಖಲೆ ರೈತಮೊರ್ಚಾ ವತಿಯಿಂದ ಅಭಿನಂದನೆ

ದೇವನಹಳ್ಳಿ: ಕೇಂದ್ರ ಬಿಜೆಪಿ ನರೇಂದ್ರ ಮೋದಿ ಸರಕಾರದಲ್ಲಿ ಕೊರೊನಾ ಎಂಬ ಹೆಮ್ಮಾರಿಯನ್ನು ತಡೆಗಟ್ಟುವಲ್ಲಿ ದೃಢ ನಿರ್ಧಾರ ಕೈಗೊಂಡ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಸುಧಾಕರ್ ಅವರಿಗೆ ಅಭಿನಂದಿಸುತ್ತೇನೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಎಚ್.ಎಂ.ರವಿಕುಮಾರ್ ತಿಳಿಸಿದರು.

 

ಭಾರತೀಯ ಜನತಾ ಪರ್ಟಿಯಿಂದ ಕೋವಿಡ್ ತಡೆಯುವಲ್ಲಿ ಸಾಕಷ್ಟು ಯೋಜನೆಗಳನ್ನು ರೂಪಿಸಿಕೊಂಡು ಕಾಲ ಕಾಲಕಾಲಕ್ಕೆ ಲಾಕ್ ಡೌನ್ ಮಾಡುವುದರ ಮೂಲಕ ಯಶಸ್ಸು ಕಂಡಿದೆ. ಇದುವರೆಗೂ ೧೦೦ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿ ದಾಖಲೆ ಬರೆದ ಭಾರತ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಈ ಹೆಗ್ಗಳಿಕೆಯು ಬಿಜೆಪಿ ಸರಕಾರಕ್ಕೆ ಸಲ್ಲುತ್ತದೆ. ಶ್ರಮಿಸಿದ ಪ್ರತಿಯೊಬ್ಬ ಸರಕಾರಿ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು, ವೈದ್ಯರು, ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತರು, ಅಂಗನವಾಡಿ ಸಹಾಯಕರು, ಕೋವಿಡ್ ವಾರಿಯರ್ಸ್‌ಗಳಿಗೆ ನಮ್ಮ ರೈತ ಮೋರ್ಚಾ ವತಿಯಿಂದ ಅಭಿನಂದಿಸಲಾಗುತ್ತಿದೆ. ಈ ಸುಸಂದರ್ಭದಲ್ಲಿ ಜಿಲ್ಲೆಯ ಸರಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯವೃಂದಕ್ಕೆ ಗೌರವ ಸಲ್ಲಿಸುವ ಕಾರ್ಯ ಮಾಡಲಾಗುತ್ತದೆ. ಬಿಜೆಪಿ ಸುವರ್ಣ ದಿನಗಳು ಪ್ರಾರಂಭವಾಗುತ್ತಿರುವುದು ಸಂತಸದ ವಿಷಯವಾಗಿದೆ ಎಂದು ಅಭಿಪ್ರಾಯ ಹಂಚಿಕೊಂಡರು.

 

ಮಂಜು ಬೂದಿಗೆರೆ

9113813926

Leave a Reply

Your email address will not be published. Required fields are marked *

You cannot copy content of this page

error: Content is protected !!