ಆತ್ಮಹತ್ಯೆ ಮಾಡಿಕೊಂಡ ನಿಷ್ಟಾವಂತ ಕಾರ್ಯಕರ್ತನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಶಾಸಕ ಚಿದಾನಂದ ಗೌಡ.

ಆತ್ಮಹತ್ಯೆ ಮಾಡಿಕೊಂಡ ನಿಷ್ಟಾವಂತ ಕಾರ್ಯಕರ್ತನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಶಾಸಕ ಚಿದಾನಂದ ಗೌಡ.

ಸಿರಾ ತಾಲ್ಲೂಕಿನ ಬರಗೂರು ಗ್ರಾಮದ ಎಸ್.ಸಿ ಕಾಲೋನಿಯ ಬಿಜೆಪಿ ಪಕ್ಷದ ನಿಷ್ಟಾವಂತ ಕಾರ್ಯಕರ್ತ ಕರಿಯಣ್ಣ ನವರು ತಮ್ಮ ವೈಯಕ್ತಿಕ ಕಾರಣಗಳಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಇಂದು ಮಾನ್ಯ ವಿಧಾನ ಪರಿಷತ್ ಶಾಸಕರಾದ ಶ್ರೀ ಚಿದಾನಂದ್ ಎಂ ಗೌಡ ರವರು ಕರಿಯಣ್ಣ ನವರ ಮನೆಗೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ ಧನ ಸಹಾಯ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರುಗಳಾದ ಲೋಕೇಶ್, ಶಾಮಿಯಾನ ಸಿದ್ದಪ್ಪ, ಮಂಜುನಾಥ್, ಗೋಪಿಕುಂಟೆ ಸುಬ್ರಮಣ್ಯ ಸ್ವಾಮಿ, ಶ್ರೀನಿವಾಸ್, ದೊಡ್ಡಬಾಣಗೆರೆ ಶ್ರೀಧರ್, ಮಾಜಿ ತಾಲ್ಲೂಕು ಪಂಚಾಯ್ತಿ ಸದಸ್ಯರಾದ ಶ್ರೀ ಚಿಕ್ಕಣ್ಣ ಹಾಗೂ ಇತರ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!