ಕೋಲಾರ ಜಿಲ್ಲಾಸ್ಪತ್ರೆಗೆ ಆಕ್ಸಿಜನ್ ಹಾಗೂ ವೆಂಟಿಲೇಟರ್ ಸೌಲಭ್ಯವುಳ್ಳ ಆಂಬುಲೆನ್ಸ್ ನೀಡಿದ ಶಾಸಕ ಚಿದಾನಂದ ಗೌಡ.

ಕೋಲಾರ ಜಿಲ್ಲಾಸ್ಪತ್ರೆಗೆ ಆಕ್ಸಿಜನ್ ಹಾಗೂ ವೆಂಟಿಲೇಟರ್ ಸೌಲಭ್ಯವುಳ್ಳ ಆಂಬುಲೆನ್ಸ್ ನೀಡಿದ ಶಾಸಕ ಚಿದಾನಂದ ಗೌಡ.

     ಕೋಲಾರ_ ವಿಧಾನ ಪರಿಷತ್ ಶಾಸಕ   ರಾದ ಶ್ರೀ ಚಿದಾನಂದ್ ಎಂ ಗೌಡರವರು ಇಂದು ತಮ್ಮ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಕೋಲಾರ ಜಿಲ್ಲಾಸ್ಪತ್ರೆಗೆ ಆಂಬುಲೆನ್ಸ್ ಕೊಡುಗೆಯಾಗಿ ನೀಡಿದರು.

ಮಾನ್ಯ ವಿಧಾನ ಪರಿಷತ್ ಶಾಸಕರಾದ ಶ್ರೀ ವೈ. ಎ ನಾರಾಯಣ ಸ್ವಾಮಿ ಯವರು ಹಾಗೂ ಚಿದಾನಂದ್ ಎಂ ಗೌಡ ರವರು ಆಂಬುಲೆನ್ಸ್ ಗೆ ಚಾಲನೆ ಕೊಟ್ಟರು.

 

 

ಈ ಕಾರ್ಯಕ್ರಮ ಕುರಿತು ಮಾತನಾಡಿದ ಚಿದಾನಂದ ಗೌಡ್ರು ಕರೋನ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಗ್ರಾಮೀಣ ಪ್ರದೇಶದ ರೋಗಿಗಳಿಗೆ ಅನುಕೂಲವಾಗಲೆಂದು ಸುಸರ್ಜಿತ ಆಕ್ಸಿಜನ್ ಮತ್ತು ವೆಂಟಿಲೇಟರ್ ಸೌಲಭ್ಯವುಳ್ಳ ಆಂಬುಲೆನ್ಸ್ ನೀಡಿದ್ದು, ಮುಂದಿನ ದಿನಗಳಲ್ಲಿ ನನ್ನ ಕ್ಷೇತ್ರ ವ್ಯಾಪ್ತಿಯ ಮುಂತಾದ ಜಿಲ್ಲೆಗಳಿಗೂ ನೀಡಿ, ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವುದಾಗಿ ತಿಳಿಸಿದರು.

 

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಜಗದೀಶ್, ವೈದ್ಯಾಧಿಕಾರಿಗಳಾದ ಮಂಜುನಾಥ್ ರೆಡ್ಡಿ, ಕೋಲಾರ ಬಿಜೆಪಿ ಜಿಲ್ಲಾಧ್ಯಕ್ಷರಾದ ವೇಣುಗೋಪಾಲ್, ತಿಮ್ಮರಾಯಪ್ಪ, ಮಾಗೇರಿ ನಾರಾಯಣಸ್ವಾಮಿ, ವಿಜಯ್ ಕುಮಾರ್, ಬಾಲಾಜಿ, ಸಹ್ಯಾದ್ರಿಯ ಕಾಲೇಜ್ ಉದಯ್ ರವರು, ಮುನಿವೆಂಕಟಪ್ಪ, ಕಾನಿಷ್ಕ ಶಶಿ ಕುಮಾರ್ ರವರು ಹಾಗೂ ಅನೇಕ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!