ಡಾಕ್ಟರ್ ಜಿ ಪರಮೇಶ್ವರ್ ಕೊರೋನ ಸೋಂಕಿನಿಂದ ಗುಣಮುಖರಾಗಲು ತೆಂಗಿನಕಾಯಿ ಒಡೆದು ದೇವರಲ್ಲಿ ಪ್ರಾರ್ಥಿಸಿದ ಅಭಿಮಾನಿಗಳು

ಡಾಕ್ಟರ್ ಜಿ ಪರಮೇಶ್ವರ್ ಕೊರೋನ ಸೋಂಕಿನಿಂದ ಗುಣಮುಖರಾಗಲು ತೆಂಗಿನಕಾಯಿ ಒಡೆದು ದೇವರಲ್ಲಿ ಪ್ರಾರ್ಥಿಸಿದ ಅಭಿಮಾನಿಗಳು.

 

ತುಮಕೂರು_ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಕೋರಟಗೆರೆ ಕ್ಷೇತ್ರದ ಶಾಸಕರಾದ ಡಾಕ್ಟರ್ ಜಿ ಪರಮೇಶ್ವರ್ ಅವರಿಗೆ ಕೊರೋನ ಸೋಂಕು ತಗುಲಿತ್ತು ಇನ್ನು ಅವರು ಬೇಗ ಗುಣಮುಖರಾಗಲಿ ಎಂದು ಅಖಿಲ ಕರ್ನಾಟಕ ಡಾಕ್ಟರ್ ಜಿ ಪರಮೇಶ್ವರ್ ಯುವ ಸೈನ್ಯದ ಪದಾಧಿಕಾರಿಗಳು ತುಮಕೂರಿನ ಬಿ.ಜಿ ಪಾಳ್ಯದ ಗಣಪತಿ ದೇವಸ್ಥಾನದಲ್ಲಿ ತೆಂಗಿನಕಾಯಿ ಒಡೆಯುವ ಮೂಲಕ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.

 

 

 

ಇದೇ ಸಂದರ್ಭದಲ್ಲಿ ಮಾತನಾಡಿದ ಅಖಿಲ ಕರ್ನಾಟಕ ಡಾಕ್ಟರ್ ಜಿ ಪರಮೇಶ್ವರ್ ಯುವ ಸೈನ್ಯ ರಾಜ್ಯಾಧ್ಯಕ್ಷ ನಗುತಾ ರಂಗನಾಥ ಮಾತನಾಡಿ ರಾಜ್ಯ ಕಂಡ ಉತ್ತಮ ನಾಯಕರಲ್ಲಿ ಡಾಕ್ಟರ್ ಜಿ ಪರಮೇಶ್ವರ್ ಅವರು ಕೂಡ ಒಬ್ಬರು ಅವರು ರಾಜ್ಯ ಕಂಡ ಉತ್ತಮ ದಲಿತ ಸಮುದಾಯದ ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು ಇನ್ನು ಅವರಿಗೆ ಕರೋನಾ ಸೋಂಕು ತಗುಲಿದ್ದು ಅದರಿಂದ ಅವರು ಶೀಘ್ರ ಗುಣಮುಖರಾಗಲಿ ಎಂದು ತೆಂಗಿನಕಾಯಿ ಒಡೆಯುವ ಮೂಲಕ ದೇವರಲ್ಲಿ ಪ್ರಾರ್ಥಿಸಿ ಇರುವುದಾಗಿ ತಿಳಿಸಿದರು.

 

 

ಇದೇ ಸಂದರ್ಭದಲ್ಲಿ ಅಖಿಲ ಕರ್ನಾಟಕ ಡಾಕ್ಟರ್ ಜಿ ಪರಮೇಶ್ವರ್ ಯುವ ಸೈನ್ಯ ತುಮಕೂರು ಜಿಲ್ಲಾಧ್ಯಕ್ಷ ನರಸಿಂಹಮೂರ್ತಿ, ನಿಧಿ ಕುಮಾರ್, ಸಿದ್ದಲಿಂಗಯ್ಯ, ಜಬಿವುಲ್ಲಾ, ರಾಜ್ಯ ಕಾರ್ಯದರ್ಶಿ ರಮೇಶ್, ರಾಜಣ್ಣ, ಮಹಾಲಿಂಗಯ್ಯ, ವಕೀಲರಾದ ಟಿ.ಆರ್ ನಾಗೇಶ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು

 

 

ವರದಿ ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!