ಟೈಲರ್ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ.

ಟೈಲರ್ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ.

 

 

ತುಮಕೂರು_ಕಳೆದ ಎರಡು ದಿನಗಳ ಹಿಂದೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ನನ್ನ ಕೆಲವರು ಶಿರಛೇದ ಮಾಡಿ ಹತ್ಯೆ ಮಾಡಿದರು.

 

 

 

ಇನ್ನು ಘಟನೆಯನ ಖಂಡಿಸಿರುವ ಹಲವು ಹಿಂದೂಪರ ಸಂಘಟನೆಗಳು ಕಳೆದ ಎರಡು ದಿನಗಳಿಂದ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತಪಡಿಸಿದವು.

 

 

ಇನ್ನು ಕನ್ನಯ್ಯ ಲಾಲ್ ಹತ್ಯೆ ಸಂಬಂಧ ತುಮಕೂರಿನಲ್ಲಿ ಗುರುವಾರ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ಕನ್ನಯ್ಯ ಲಾಲ್ ಹತ್ಯೆ ಮಾಡಿರುವ ಆರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಪ್ರತಿಭಟನೆ ನಡೆಸಿದರು.

 

ಇನ್ನು ತುಮಕೂರು ನಗರದ ಟೌನ್ಹಾಲು ವೃತದಲ್ಲಿ ಜಮಾವಣೆ ಗೊಂಡ ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ಇಬ್ಬರು ಆರೋಪಿಗಳ ಪ್ರತಿ ಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿ ದಿಕ್ಕಾರಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

 

 

ಇದೇ ಸಂದರ್ಭದಲ್ಲಿ ಮಾತನಾಡಿರುವ ತುಮಕೂರು ಬಜರಂಗದಳ ಜಿಲ್ಲಾ ಸಂಚಾಲಕ ಮಂಜು ಭಾರ್ಗವ ಮಾತನಾಡಿ ನೂಪುರ್ ಶರ್ಮಾ ಹೇಳಿಕೆಯನ್ನ ಬೆಂಬಲಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಟೈಲರ್ ನನ್ನು ಕ್ರೂರವಾಗಿ ಹತ್ಯೆ ಮಾಡಿದ್ದಾರೆ ಇನ್ನು ಹತ್ಯೆ ಮಾಡಿರುವ ಆರೋಪಿಗಳು ಅವುಗಳನ್ನು ವಿಡಿಯೋ ಮಾಡಿ ವಿಕೃತಿ ಮೆರೆದಿದ್ದು ನಂತರ ಪ್ರಧಾನಿಯವರೆಗೂ ಸಹ ಬೆದರಿಕೆಯನ್ನು ಹಾಕಿರುವುದು ನಿಜಕ್ಕೂ ಖಂಡನೆಯ ಹಾಗಾಗಿ ಕೂಡಲೇ ಆರೋಪಿಗಳನ್ನ ತೀವ್ರ ವಿಚಾರಣೆ ನಡೆಸಿ ಘಟನೆಯ ಹಿಂದಿರುವ ಕಾರಣವನ್ನು ಶೀಘ್ರ ಪತ್ತೆ ಮಾಡಿ ಆರೋಪಿಗಳನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇನ್ನು ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ ಪ್ರತಿಭಟನಾಕಾರರು ಅಪರ ಜಿಲ್ಲಾಧಿಕಾರಿಗಳಿಗೆ ಮನವಿಯನ್ನ ಸಲ್ಲಿಸಿದರು.ಇನ್ನು ಪ್ರತಿಭಟನೆಯಲ್ಲಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ನ ಕಾರ್ಯಕರ್ತರು ಹಾಜರಿದ್ದರು.

 

ವರದಿ _ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!