ನಟ ದರ್ಶನ್ ಮೇಲೆ ಚಪ್ಪಲಿ ಎಸೆತ ಪ್ರಕರಣ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ.

ನಟ ದರ್ಶನ್ ಮೇಲೆ ಚಪ್ಪಲಿ ಎಸೆತ ಪ್ರಕರಣ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ.

 

ತುಮಕೂರು_ಹೊಸಪೇಟೆಯಲ್ಲಿ ನಡೆದ ಕ್ರಾಂತಿ ಚಲನಚಿತ್ರದ ಧ್ವನಿಸುರುಳಿ ಸಂದರ್ಭದಲ್ಲಿ ನಟ ತೂಗುದೀಪ್ ದರ್ಶನ್ ಮೇಲೆ ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ತುಮಕೂರು ಜಿಲ್ಲಾ ದರ್ಶನ್ ಅಭಿಮಾನಿಗಳ ಸಂಘದ ವತಿಯಿಂದ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಮಾಡಿ ಆರೋಪಿಯನ್ನ ಬಂಧಿಸಿ ಗಡಿಪಾರು ಮಾಡಬೇಕು ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

 

 

 

ಇನ್ನು ಚಪ್ಪಲಿ ಎಸೆದ ಆರೋಪಿಯನ್ನ ಶೀಘ್ರವೇ ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು ಕೂಡಲೇ ಆರೋಪಿಯ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ತಹಸಿಲ್ದಾರ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

 

ಇದೆ ಸಂದರ್ಭದಲ್ಲಿ ಮಾತನಾಡಿದ ತುಮಕೂರು ಜಿಲ್ಲಾ ದರ್ಶನ ಅಭಿಮಾನಿಗಳ ಸಂಘದ ಗಿರೀಶ್ ಮಾತನಾಡಿ ದರ್ಶನ್ ರವರ ಮೇಲೆ ಚಪ್ಪಲಿ ಎಸೆದ ಆರೋಪಿಯನ್ನ ಬಂಧಿಸಬೇಕು ಇನ್ನು ಇದು ಕನ್ನಡ ನಾಡಿಗೆ ಮಾಡಿದ ಅಪಮಾನ ಇದರಿಂದ ದರ್ಶನ ಅಭಿಮಾನಿಗಳ ಮನಸ್ಸಿಗೆ ತೀವ್ರ ನೋವುಂಟು ತಂದಿದ್ದು ಶೀಘ್ರವೇ ಆರೋಪಿಯ ಬಂಧನವಾಗಬೇಕು ಇಲ್ಲವಾದಲ್ಲಿ ರಾಜ್ಯದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದರು.

 

ಇದೇ ಸಂದರ್ಭದಲ್ಲಿ ಕನ್ನಡಪರ ಸಂಘಟನೆಗಳ ಮುಖಂಡ ಎಸ್ ಶಂಕರ್, ಅರುಣ್, ಚೇತನ್, ರಾಕೇಶ್ ಸೇರಿದಂತೆ ದರ್ಶನ್ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಅಭಿಮಾನಿಗಳು ಪ್ರತಿಭಟನೆಯಲ್ಲಿ ಹಾಜರಿದ್ದರು

 

 

ವರದಿ_ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!