ಗಾಲಿ ಜನಾರ್ಧನ ರೆಡ್ಡಿ ಹೊಸ ಪಾರ್ಟಿ ಸ್ಥಾಪನೆ ನಮ್ಮ ಪಕ್ಷಕ್ಕೆ ಒಳ್ಳೆಯ ಬೆಳವಣಿಗೆಯಲ್ಲ: ಸಚಿವ ಮಾಧುಸ್ವಾಮಿ 

ಗಾಲಿ ಜನಾರ್ಧನ ರೆಡ್ಡಿ ಹೊಸ ಪಾರ್ಟಿ ಸ್ಥಾಪನೆ ನಮ್ಮ ಪಕ್ಷಕ್ಕೆ ಒಳ್ಳೆಯ ಬೆಳವಣಿಗೆಯಲ್ಲ: ಸಚಿವ ಮಾಧುಸ್ವಾಮಿ 

 

 

ತುಮಕೂರು: ಮಾಜಿ ಸಚಿವ ಜನಾರ್ಧನರೆಡ್ಡಿ ಹೊಸ ಪಕ್ಷ ಘೋಷಣೆ ಆಶ್ಚರ್ಯ ಮೂಡಿಸಿದ್ದು ಅವರನ್ನು ಬಿಜೆಪಿ ಪಕ್ಷದಲ್ಲಿ ಉಳಿಸಿಕೊಳ್ಳಲು ಸಾಧ್ಯವಿರುವ ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

 

 

ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರೆಡ್ಡಿ ಅವರು ಹೊಸ ಪಕ್ಷ ಘೋಷಣೆ ಮಾಡಿರುವ ವಿಷಯ ಮಾಧ್ಯಮಗಳ ಮೂಲಕ ನಮಗೂ ಗೊತ್ತಾಗಿದ್ದು, ಯಾವುದೇ ರಾಜ್ಯದಲ್ಲಿಯೂ ಹೊಸ ಪಕ್ಷಗಳಿಗೆ ಭವಿಷ್ಯವಿಲ್ಲ ಎಂಬ ಸ್ಥಿತಿಯಲ್ಲಿ ಹೊಸ ಪಕ್ಷ ಘೋಷಣೆ ಆಶ್ಚರ್ಯ ಮೂಡಿಸಿದೆ ಎಂದರು

 

 

 

.

 

ರೆಡ್ಡಿಯವರು ಹೊಸ ಪಕ್ಷ ಘೋಷಣೆ ಮಾಡುತ್ತಾರೆ ಎಂದು ಕಳೆದೊಂದು ವಾರದಿಂದ ಸುದ್ದಿಯಲ್ಲಿತ್ತು. ರಾಜಕಾರಣದಲ್ಲಿ ಇವತ್ತು ಯಾವುದೇ ರಾಜ್ಯದಲ್ಲಿ ಎರಡು ಅಥವಾ ಮೂರು ಪಕ್ಷ ಮೀರಿ, ಬೇರೆ ಪಕ್ಷಗಳು ಅಷ್ಟೊಂದು ಸ್ವಾಭಾವಿಕವ ಬೆಳವಣಿಗೆಯಾಗಿಲ್ಲ ಎಂದರು.

 

 

 

ಅವರು ಯಾವ ಉದ್ದೇಶದಿಂದ ಇನ್ನೊಂದು ರಾಜಕೀಯ ಪಕ್ಷ ಮಾಡಲಿಕ್ಕೆ ಹೊರಟರೂ ನಮಗೇನು ಮಾಹಿತಿ ಇಲ್ಲ ಅವರು ನನಗೂ ಒಳ್ಳೆ ಸ್ನೇಹಿತರು, ಅವರೊಂದಿಗೆ ಮಾತನಾಡಿಸಿ ಕೇಳುತ್ತೇವೆ ಎಂದರು.

 

 

 

 

ನಮ್ಮ ದೃಷ್ಠಿಯಲ್ಲಿ ನಮ್ಮ ಪಕ್ಷದಲ್ಲಿದ್ದವರೇ ಹೊಸ ಪಕ್ಷ ಸ್ಥಾಪಿಸುವುದು ಒಳ್ಳೆಯ ಬೆಳವಣಿಗೆ ಅಲ್ಲ, ನಾಳೆಯಿಂದಲೇ ಪ್ರಯತ್ನ ಮಾಡಿ ಅವರನ್ನ ಪಕ್ಷದಲ್ಲಿ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

 

 

ಇನ್ನು ಮಾಜಿ ಸಚಿವ ಗಾಲಿ ಜನಾರ್ದನ್ ರೆಡ್ಡಿ ಹೊಸ ಪಕ್ಷ ಘೋಷಣೆ ಬೆನ್ನಲ್ಲೇ ಬಿಜೆಪಿ ಪಕ್ಷಕ್ಕೆ ತಳಮಳ ಶುರುವಾಗಿದ್ದು ರೆಡ್ಡಿ ರಾಜಕೀಯ ನಡೆ ಬಿಜೆಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದ ಎಂದರೆ ತಪ್ಪಾಗಲಾರದು.

Leave a Reply

Your email address will not be published. Required fields are marked *

You cannot copy content of this page

error: Content is protected !!