ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ವೈಯಕ್ತಿಕವಾಗಿ 5,00,000 ರೂಗಳ ದೇಣಿಗೆ ನೀಡಿದ ಶಾಸಕ ಡಿಸಿ ಗೌರಿಶಂಕರ್

ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ವೈಯಕ್ತಿಕವಾಗಿ 5,00,000 ರೂಗಳ ದೇಣಿಗೆ ನೀಡಿದ ಶಾಸಕ ಡಿಸಿ ಗೌರಿಶಂಕರ್

ತುಮಕೂರು ಗ್ರಾಮಾಂತರದ ನಾಗವಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಮ್ಮಸಂದ್ರ ಗ್ರಾಮದಲ್ಲಿ  ಶಾಸಕರಾದ ಸನ್ಮಾನ್ಯ ಶ್ರೀ ಡಿಸಿ ಗೌರಿಶಂಕರ್ ಅವರು 15 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿ,22 ಲಕ್ಷ ವೆಚ್ಚದಲ್ಲಿ ಮನೆ ಮನೆಗೆ ಸಂಪರ್ಕ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.

 

Advertisement

 

 

ಶ್ರೀ ಮುತ್ತಿನಮ್ಮ ದೇವಿಯ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ತಮ್ಮ ಕುಟುಂಬದ ವತಿಯಿಂದ ವೈಯಕ್ತಿಕವಾಗಿ 5,00,000 (ಐದು ಲಕ್ಷ) ರೂಗಳನ್ನು ನೀಡುವುದಾಗಿ ತಿಳಿಸಿ, ಸ್ಥಳದಲ್ಲಿಯೇ ಗ್ರಾಮಸ್ಥರುಗಳ ಸಮ್ಮುಖದಲ್ಲಿ 3,00,000 (ಮೂರು ಲಕ್ಷ) ರೂಗಳನ್ನು ನೀಡಿದ್ದರು.

 

 

 

ಯುಗಾದಿ ಹಬ್ಬದ ಪ್ರಯುಕ್ತ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸುಮಾರು 200ಕ್ಕೂ ಹೆಚ್ಚು ಹೆಣ್ಣು ಮಕ್ಕಳಿಗೆ ಅರಿಶಿನ ಕುಂಕುಮ ಬಳೆ ಸೀರೆ ನೀಡುವ ಮೂಲಕ ಬಾಗಿನ ನೀಡಿದರು.

 

 

 

 

ಇದೇ ಸಂದರ್ಭದಲ್ಲಿ ಶಾಸಕರ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚಿ ಹಲವು ಯುವಕರುಗಳು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

Leave a Reply

Your email address will not be published. Required fields are marked *

You cannot copy content of this page

error: Content is protected !!