ಮಾಜಿ ಸಂಸದ ಧ್ರುವನಾರಾಯಣ ನಿಧನಕ್ಕೆ – ಡಾ. ಜಿ ಪರಮೇಶ್ವರ್ ಸಂತಾಪ.

ಮಾಜಿ ಸಂಸದ ಧ್ರುವನಾರಾಯಣ ನಿಧನಕ್ಕೆ – ಡಾ. ಜಿ ಪರಮೇಶ್ವರ್ ಸಂತಾಪ.

 

 

ತುಮಕೂರು – ಚಾಮರಾಜನಗರದ ಮಾಜಿ ಸಂಸದ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಆರ್ ಧೃವ ನಾರಾಯಣ್ ನಿಧನಕ್ಕೆ ಮಾಜಿ ಉಪಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್ ಸಂತಾಪ ಸೂಚಿಸಿದ್ದು ಆರ್ ಧ್ರುವನಾರಾಯಣ್ ಒಬ್ಬ ಒಳ್ಳೆಯ ಸ್ನೇಹಿತ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ಆಘಾತ ಉಂಟಾಗಿದ್ದು ಅತ್ಯಂತ ಪ್ರಾಮಾಣಿಕ ಹಾಗೂ ಶಿಸ್ತಿನ ಸಿಪಾಯಿ ರಾಜಕಾರಣಿಗಳಲ್ಲಿ ಇವರ ಹೆಸರು ಮುಂಚೂಣಿಯಲ್ಲಿತ್ತು ಅವರ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದ್ದು ಅವರ ನಿಧನದ ದುಃಖವನ್ನು ಬರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ ಎಂದಿದ್ದಾರೆ.

 

 

 

 

 

 

ಇನ್ನು ಮಾಜಿ ಸಂಸದ ಆರ್ ಧ್ರುವನಾರಾಯಣ್ ರವರು ಸರಳ ಸಜ್ಜನಿಕೆಯ ಹಾಗೂ ಶಿಸ್ತಿನ ಸಿಪಾಯಿಯಂತೆ ಕೆಲಸ ನಿರ್ವಹಿಸಿದ್ದ ಅವರು ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದರು.

 

 

 

 

 

ಇನ್ನು ಮಾಜಿ ಸಂಸದ ಆರ್ ಧ್ರುವನಾರಾಯಣ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ,ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಜಿ. ಟಿ ದೇವೇಗೌಡ ಸೇರಿದಂತೆ ಹಲವು ಗಣ್ಯರು ಆರ್ ಧ್ರುವನಾರಾಯಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!