ತುಮಕೂರು ನಗರ ವಿ.ಸ ಕ್ಷೇತ್ರ ಅತಿಕ್ ಅಹಮದ್ ಗೆ ಒಲಿದ ಕಾಂಗ್ರೆಸ್ ಟಿಕೆಟ್….?

ತುಮಕೂರು ನಗರ ವಿ.ಸ ಕ್ಷೇತ್ರ ಅತಿಕ್ ಅಹಮದ್ ಗೆ ಒಲಿದ ಕಾಂಗ್ರೆಸ್ ಟಿಕೆಟ್….?

 

 

ತುಮಕೂರು – 2023 ಸಾರ್ವತ್ರಿಕ ವಿಧಾನ ಸಭಾ ಚುನಾವಣೆ ಹಿನ್ನೆಲೆ ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಮುಖಂಡ ಅತಿಕ್ ಅಹಮದ್ ರವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಪಕ್ಷದಿಂದ ಹೈ ಕಮಾಂಡ್ ಗ್ರೀನ್ ಸಿಗ್ನಲ್ ಸಿಕ್ಕಿದೆ ಎನ್ನಲಾಗಿದೆ.

 

 

 

ಇನ್ನು ತುಮಕೂರು ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಹಲವು ಆಕಾಂಕ್ಷಿಗಳು ತೀವ್ರ ಪೈಪೋಟಿ ನಡೆಸಿದ್ದರು ಆದರೆ ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಅತಿಕ್ ಅಹಮದ್ ಗೆ ಟಿಕೆಟ್ ನೀಡಲು ಒಪ್ಪಿಗೆ ಸೂಚಿಸಿದೆ ಎಂದು ಎಐಸಿಸಿಯಿಂದ ಮಾಹಿತಿ ಲಭ್ಯವಾಗಿದೆ.

 

 

ಇನ್ನು ಬೆಂಗಳೂರಿನ ಉದ್ಯಮಿ ಆರ್ಟಿಕ ಗೋಲ್ಡ್ ಕಂಪನಿಯ ಮಾಲೀಕ ಬೊಮ್ಮನಹಳ್ಳಿ ಬಾಬು, ಮಾಜಿ ಶಾಸಕ ರಫೀಕ್ ಅಹಮದ್, ಇಕ್ಬಾಲ್ ಅಹಮದ್, ಫರ್ಹಾನ ಬೇಗಂ ,ಶಶಿ ಹುಲಿಕುಂಟೆ ಸೇರಿದಂತೆ ಹಲವು ಮುಖಂಡರ  ಕೇಳಿ ಬಂದಿತ್ತು ಆದರೆ ಕೊನೆ ಕ್ಷಣದಲ್ಲಿ ಅಚ್ಚರಿ ಎಂಬಂತೆ ಅತಿಕ್ ಅಹಮದ್ ರವರಿಗೆ ಟಿಕೆಟ್ ಲಭಿಸಿದೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ .

 

ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಹಲವು ಕಾರ್ಯಕರ್ಮಗಳನ್ನ ನಿರ್ವಹಿಸಿದ ಕೀರ್ತಿ ಅತಿಕ್ ಅಹಮದ್ ರವರಿಗೆ  ಸಲ್ಲುತ್ತದೆ. ಇನ್ನು ತುಮಕೂರು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿದ್ದ ಅತಿಕ್ ರವರು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳನ್ನ ಜನತೆಗೆ ತಲುಪಿಸಲು ಪ್ರಮುಖ ಪಾತ್ರ ವಹಿಸಿದ್ದರು.

 

 

ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ರವರ ಆಪ್ತ ಬಣ್ಣದಲ್ಲಿ ಗುರುತಿಸಿಕೊಂಡಿದ್ದ ಅತಿಕ್ ಮಹಮ್ಮದ್ ರವರಿಗೆ dr ಜಿ. ಪರಮೇಶ್ವರ್, ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸಹ ಅತಿಕ್ ಅಹಮದ್ ಗೆ  ಟಿಕೆಟ್ ನೀಡಲು ಒಪ್ಪಿಗೆ ಸೂಚಿಸಿದ್ದರು ಎನ್ನಲಾಗಿದೆ.

 

 

ಇನ್ನು ಅಧಿಕೃತವಾಗಿ ಯುಗಾದಿ ಹಬ್ಬದ ದಿನದಂದು ಕಾಂಗ್ರೆಸ್ ಪಕ್ಷದಿಂದ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ .

 

 

ವರದಿ – ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!