ತುಮಕೂರು ನಗರ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ, ಭುಗಿಲೆದ್ದ ಭಿನ್ನಮತ ಸಾಮೂಹಿಕ ರಾಜೀನಾಮೆಗೆ ಮುಂದಾದ ಮೂಲ ಬಿಜೆಪಿಗರು

ತುಮಕೂರು ನಗರ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ, ಭುಗಿಲೆದ್ದ ಭಿನ್ನಮತ ಸಾಮೂಹಿಕ ರಾಜೀನಾಮೆಗೆ ಮುಂದಾದ ಮೂಲ ಬಿಜೆಪಿಗರು.

 

 

 

ತುಮಕೂರು- ಮಾಜಿ ಸಚಿವ ಸೊಗಡು ಶಿವಣ್ಣ ರವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ತುಮಕೂರು ನಗರ ಬಿಜೆಪಿ ಪಾಳಯದಲ್ಲಿ ಭಿನ್ನಮತ ಸ್ಪೋಟವಾಗಿದ್ದು.

 

 

 

 

ತಮ್ಮ ಮೆಚ್ಚಿನ ನಾಯಕನಿಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಯಲ್ಲಿ  ಬಿಜೆಪಿ ಮುಂಚೂಣಿ ನಾಯಕರು,ಕಾರ್ಯಕರ್ತರು ಸೇರಿದಂತೆ ಮೂಲ ಬಿಜೆಪಿಗರು ಬಿಜೆಪಿ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದು.

 

 

 

 

 

ಬೆಳಗ್ಗಿನಿಂದಲೂ ಸತತವಾಗಿ ಮೂಲ ಬಿಜೆಪಿಗರು ಮಾಜಿ ಸಚಿವ ಸೋಗಡು ಶಿವಣ್ಣರವರಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಇದುವರೆಗೂ ಪಕ್ಷಕ್ಕಾಗಿ ಹಗಲಿರುಳು ದುಡಿದ ನಿಷ್ಠಾವಂತ ಕಾರ್ಯಕರ್ತರಿಗೆ ತೀವ್ರ ನೋವುಂಟು ಮಾಡಿರುವ ಹಿನ್ನೆಲೆಯಲ್ಲಿ ಮೂಲ ಬಿಜೆಪಿ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದೇವೆ  ಎಂದು ಕೆಲವರು ತಿಳಿಸಿದ್ದಾರೆ.

 

 

ವರದಿ – ಮಾರುತಿ ಪ್ರಸಾದ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!