ಕಾರ್ಮಿಕರ ದಿನಾಚರಣೆಯ ದಿನದಂದು ಸ್ನೇಹಿತನ ಹುಟ್ಟುಹಬ್ಬವನ್ನು ಯುವಕರಿಂದ ವಿಶೇಷವಾಗಿ ಆಚರಣೆ

ಕಾರ್ಮಿಕರ ದಿನಾಚರಣೆಯ ದಿನದಂದು ಸ್ನೇಹಿತನ ಹುಟ್ಟುಹಬ್ಬವನ್ನು ಯುವಕರಿಂದ ವಿಶೇಷವಾಗಿ ಆಚರಣೆ

 

 

ಚಾಮರಾಜನಗರ :- ತಾಲೂಕಿನ ಕುದೇರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಹೆಗ್ಗವಾಡಿ ಗ್ರಾಮದ ಯುವಕರು ಸತೀಶ್ ಎಂಬ ತಮ್ಮ ಸ್ನೇಹಿತನ ಹುಟ್ಟುಹಬ್ಬವನ್ನು ಕಾರ್ಮಿಕರ ದಿನಾಚರಣೆಯ ದಿನದಂದು ಬಾಬಾಸಾಹೇಬ್ ಅಂಬೇಡ್ಕರ್ ರವರಿಗೆ ನಮನ ಸಲ್ಲಿಸಿ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡು ವಿಶೇಷವಾಗಿ ಆಚರಣೆ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ.

 

 

 

 

 

 

 

 

 

 

ಸಂತೆಮರಳ್ಳಿಯಿಂದ ಹೆಗ್ಗವಾಡಿ ಯಲಕ್ಕೂರು ಗ್ರಾಮಗಳಿಗೆ ಹಾದು ಹೋಗುವ ಸುಮಾರು ಎರಡು ಕಿಲೋಮೀಟರ್ ನಷ್ಟು ದೂರ ರಸ್ತೆ ಬದಿಯಲ್ಲಿ ವಿವಿಧ ರೀತಿಯ ಗಿಡಗಳನ್ನು ನೆಟ್ಟು ಹಾಗೂ ಊರ ಒಳಗಡೆ ಅನವಶ್ಯಕವಾಗಿ ಮುಖ್ಯರಸ್ತೆಯಲ್ಲಿ ಬೆಳೆದು ನಿಂತಿದ್ದ

 

 

 

 

 

 

 

 

 

 

 

ಮುಳ್ಳಿನ ಗಿಡ ಗಂಟಿಗಳನ್ನು ಕತ್ತರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿ ಸ್ವಚ್ಛತೆ ಕಾಪಾಡುವುದರ ಮೂಲಕ ಕಾರ್ಮಿಕರ ದಿನಾಚರಣೆ ಹಾಗೂ ಸ್ನೇಹಿತನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ ನಂತರ ಅಲ್ಲೇ ಪಕ್ಕದ ಜಮೀನೊಂದರಲ್ಲಿ ತೆಂಗಿನ ಮರಕ್ಕೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡದ್ದನ್ನು ಗಮನಿಸಿದ ಯುವಕರು

 

 

 

 

 

 

 

 

 

 

. ಸಮಯ ಪ್ರಜ್ಞೆಯಿಂದ ಟಾಕ್ಟರ್ ಸಹಾಯದಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರೆ ಯುವಕರ ವಿಶೇಷ ಚಿಂತನೆ ಹಾಗೂ ಸಾಮಾಜಿಕ ಕಳಕಳಿಗೆ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಹೆಗ್ಗವಾಡಿ ಗ್ರಾಮದ ಡಾ ಬಿ ಆರ್ ಅಂಬೇಡ್ಕರ್ ಸಂಘದ ಯುವಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ

 

ವರದಿ :- ನಾಗೇಂದ್ರ ಪ್ರಸಾದ್

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version