ತುಮಕೂರು ಖಾಸಗಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಭೀಕರ ಕೊಲೆ.

ತುಮಕೂರು ಖಾಸಗಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಭೀಕರ ಕೊಲೆ.

 

 

ತುಮಕೂರು; ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವನ ಭೀಕರ ಕೊಲೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ತುಮಕೂರು ನಗರದ ಜಿಸಿಆರ್ ಕಾಲೋನಿಯ ಮುಬಾರಕ್ ಪಾಷಾ(35) ಕೊಲೆಯಾದ ದುರ್ದೈವಿ. ಈತ ಕಳೆದ ರಾತ್ರಿ ನಗರದ ಖಾಸಗಿ ಬಸ್ ನಿಲ್ದಾಣಕ್ಕೆ ಬಂದಿದ್ದನು ಎನ್ನಲಾಗಿದೆ. ಈ ವೇಳೆ ಯಾರೋ ಅಪರಿಚಿತರು ಮಾರಾಕಾಸ್ತ್ರಗಳಿಂದ ಚುಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾದ ವ್ಯಕ್ತಿ ನಗರದ ಗುಬ್ಬಿ ಗೇಟ್ ಬಳಿ ಹಮಾಲಿ ಕೆಲಸ ಮಾಡಿಕೊಂಡಿದ್ದನು. ಯಾರೊಂದಿಗೋ ಗಲಾಟೆ ಮಾಡಿಕೊಂಡು ಈತ ಕೊಲೆಯಾಗಿರುವ ಶಂಕೆ ಇದ್ದು. ಕೊಲೆಗೆ ನಿಖರ ಕಾರಣ ಪೊಲೀಸ್ ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ.

 

 

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ಪರಿಶೀಲನೆ.

 

ಇನ್ನು ಕೊಲೆಯಾದ ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ವಾಡ್, ಡಿವೈಎಸ್ಪಿ ಶ್ರೀನಿವಾಸ್, ನಗರ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಬೆಚ್ಚಿ ಬಿದ್ದ ಸಾರ್ವಜನಿಕರು; ವಿವಿಧ ಕಾರ್ಯ ನಿಮಿತ್ತ ಇಂದು ಬೆಳಗ್ಗೆ ಖಾಸಗಿ ಬಸ್ ನಿಲ್ದಾಣಕ್ಕೆ ಬಂದ ಜನ ಬಸ್ ನಿಲ್ದಾಣದಲ್ಲಿ ಮೃತ ದೇಹ ನೋಡಿ ಬೆಚ್ಚಿ ಬಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!