ಈಜಲು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

ಈಜಲು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

 

ಕೊಳ್ಳೇಗಾಲ :- ತಾಲೂಕಿನ ಸಿದ್ದಯ್ಯನ ಪುರ ಗ್ರಾಮದ ಪ್ರದೀಪ್ ಕುಮಾರ್ (38) ವರ್ಷದ ವ್ಯಕ್ತಿ ತಮ್ಮ ಕುಟುಂಬ ಸದಸ್ಯರೊಂದಿಗೆ ತಮ್ಮ ಸಂಬಂದಿಕರ ಮೆನೆಗೆ ಮಂಗಲ ಸಮೀಪದ ಕಣ್ಣೂರಿಗೆ ಆಗಮಿಸಿದ್ದಾರೆ ನಂತರ ಕಾಮಗೆರೆ ಸಮೀಪದ ಗುಂಡಾಲ್ ಜಲಾಶಯ ವೀಕ್ಷಣೆ ಮಾಡಲು ಕುಟುಂಬ ಸಮೇತ ಬಂದಿದ್ದಾರೆ ನಂತರ ಪ್ರದೀಪ್ ಕುಮಾರ್ ಎಂಬುವ ವ್ಯಕ್ತಿ ಈಜಲು ತೆರಳಿದ್ದ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಮೃತ ಪಟ್ಟಿರುವ ಘಟನೆ ಸೋಮವಾರ ಮದ್ಯಾಹ್ನ 12 ಗಂಟೆ ಸಮಯದಲ್ಲಿ ಸಂಭವಿಸಿದೆ ನಂತರ ಸ್ಥಳೀಯರು ಅಗ್ನಿ ಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಜಲಾಶಯದಿಂದ ಪ್ರದೀಪ್ ಕುಮಾರ್ ಮೃತ ದೇಹವನ್ನು ಹೊರತೆಗೆದಿದ್ದಾರೆ ವಿಚಾರ ತಿಳಿದ ನಂತರ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಿಯ ಆರಕ್ಷಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

 

ವರದಿ :- ನಾಗೇಂದ್ರ ಪ್ರಸಾದ್

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version