ಮಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ, ತುಮಕೂರಿನಲ್ಲಿ ನಡೆದ ಘಟನೆ.

ಮಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ, ತುಮಕೂರಿನಲ್ಲಿ ನಡೆದ ಘಟನೆ.

 

 

ತುಮಕೂರು _ಶನಿವಾರ ಮಧ್ಯಾಹ್ನ ತುಮಕೂರಿನಲ್ಲಿ ಸುರಿದ ಭಾರಿ ಮಳೆಗೆ ರಸ್ತೆಯಲ್ಲಿ ನಿಂತಿದ್ದ ನೀರನ್ನ ವಿಡಿಯೋ ತೆಗೆಯಲು ಹೋಗಿ ಆಟೋ ಚಾಲಕನೊಬ್ಬ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ತುಮಕೂರು ನಗರದ ರಸ್ತೆ  ಹೆಗಡೆ ಕಾಲೋನಿ ಬಳಿ ಇರುವ ರೈಲ್ವೆ ಅಂಡರ್ ಪಾಸ್ ಬಳಿ ನಡೆದಿದೆ.

 

ದಾನಹ ಪ್ಯಾಲೇಸ್ ಕಡೆಯಿಂದ ಗುಬ್ಬಿಗೇಟು ಕಡೆ ಸಂಚರಿಸುತ್ತಿದ್ದ ಆಟೋ ರಸ್ತೆಯಲ್ಲಿ ಹರಿಯುತ್ತಿದ್ದ ನೀರಿನಲ್ಲಿ ಮಧ್ಯ ಹೋಗುತ್ತಿದ್ದ ವೇಳೆ  ಆಟೋ ಚಾಲಕನೊಬ್ಬ ರಸ್ತೆಯಲ್ಲಿ ನಿಂತಿದ್ದ ನೀರಿನ ವಿಡಿಯೋ ತೆಗೆಯಲು ಮುಂದಾಗಿದ್ದು ಇದೇ ವೇಳೆ ರಬ್ಸಸ ವಾಗಿ  ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿ ಹೋಗಿದ್ದು ನಾಪತ್ತೆಯಾಗಿರುವ ವ್ಯಕ್ತಿಯು ತುಮಕೂರು ನಗರದ ಮರಳೂರು ದಿಣ್ಣೆ ಮೂಲದ ನಿವಾಸಿ ಅಮ್ಜದ್ ಎಂದು ತಿಳಿದು ಬಂದಿದೆ .

 

 

ನಾಪತ್ತೆಯಾಗಿರುವ ವ್ಯಕ್ತಿ ಕೊಚ್ಚಿ ಹೋಗಿರುವ ಸ್ಥಳದಲ್ಲಿ ಹಲವು ವರ್ಷಗಳಿಂದ ಎರಡು ಬದಿಯಲ್ಲಿ ಚರಂಡಿ ಬಾಯ್ತೆರೆದು ನಿಂತಿತ್ತು ಆದರೆ ಇದುವರೆಗೂ ಅದರ ನಿರ್ವಹಣೆಗೆ ಯಾವುದೇ ಅಧಿಕಾರಿಗಳು ಮುಂದಾಗಿರಲಿಲ್ಲ ಆದರೆ ಇಂದು ಅಧಿಕಾರಿಗಳ ನಿರ್ಲಕ್ಷಕ್ಕೆ ವ್ಯಕ್ತಿ ಒಬ್ಬ ಕೊಚ್ಚಿ ಹೋಗಿರುವುದು ದುರದೃಷ್ಟಕರ

 

 

ನಾಪತ್ತೆಯಾದ ವ್ಯಕ್ತಿಗಾಗಿ ತೀವ್ರ ಶೋಧ ನಡೆಯುತ್ತಿದ್ದು ಸ್ಥಳಕ್ಕೆ ತಿಲಕ್ ಪಾರ್ಕ್ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೇಟಿ ನೀಡಿದ್ದು ನಾಪತ್ತೆಯಾಗಿರುವ ವ್ಯಕ್ತಿಗಾಗಿ ಹುಡುಕಟ ನಡೆಸಿದ್ದಾರೆ.

 

 

ಇನ್ನು ಎರಡು ಬದಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಸುರಿಯುತ್ತಿರುವ ಮಳೆಯ ನಡುವೆ ನಾಪತ್ತೆಯಾಗಿರುವ ವ್ಯಕ್ತಿಗಾಗಿ ತೀವ್ರಶೋಧ ನಡೆಸಿದ್ದಾರೆ.

 

 

ವರದಿ _ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!