ತುಮಕೂರು ನಗರದಲ್ಲಿ ಹಠಾತ್ ಕುಸಿದ ರಸ್ತೆ ವಾಹನ ಸವಾರರ ಬಲಿಗಾಗಿ ಕಾದು ಕುಳಿತ ಬೃಹತ್ ಗಾತ್ರದ ಗುಂಡಿ.

ತುಮಕೂರು ನಗರದಲ್ಲಿ ಹಠಾತ್ ಕುಸಿದ ರಸ್ತೆ ವಾಹನ ಸವಾರರ ಬಲಿಗಾಗಿ ಕಾದು ಕುಳಿತ ಬೃಹತ್ ಗಾತ್ರದ ಗುಂಡಿ.

 

ತುಮಕೂರು_ತುಮಕೂರು ನಗರದಲ್ಲಿ ಕಳೆದ ಒಂದು ವಾರದ ಹಿಂದೆ ಸುರಿದ ಭಾರಿ ಮಳೆಗೆ ತುಮಕೂರು ನಗರದಲ್ಲಿ ಸಾಕಷ್ಟು ತೊಂದರೆ ಉಂಟಾಗಿದ್ದು ಪಾಲಿಕೆ ವತಿಯಿಂದ ಸಾಕಷ್ಟು ಮುಂಜಾಗ್ರತ ಕ್ರಮ ಕೈಗೊಳ್ಳುವಲ್ಲಿ ಪಾಲಿಕೆ ನಿರತವಾಗಿದೆ.

 

 

ಇಂತಹ ಸಮಯದಲ್ಲಿ ತುಮಕೂರು ನಗರದ ಕುಣಿಗಲ್ ರಸ್ತೆಯ ಸದಾಶಿವನಗರದ ಹೇಮಾವತಿ ಕಚೇರಿ ಮುಂಭಾಗದಲ್ಲಿ ಹಟಾತ್ತನೆ ರಸ್ತೆ ಕುಸಿದಿದ್ದು ಸುಮಾರು 10 ಅಡಿಗೂ ಹೆಚ್ಚು ಆಳದ ಗುಂಡಿ ನಿರ್ಮಾಣವಾಗಿದ್ದು ವಾಹನ ಸವಾರರ ಬಲಿಗಾಗಿ ಕಾದು ಕುಳಿತಿದೆ.

 

 

 

ಇನ್ನು ನಗರಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಯಾಗಿರುವುದರಿಂದ ಪ್ರತಿನಿತ್ಯ ಸಾವಿರಾರು ವಾಹನಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದು ರಸ್ತೆಯಲ್ಲಿ ಬೃಹತ್ ಗಾತ್ರದ ಗುಂಡಿ ಬಿದ್ದಿದ್ದು ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದ್ದು ಕೂಡಲೇ ಪಾಲಿಕೆ ಅಧಿಕಾರಿಗಳು ಹಾಗೂ ಸಂಬಂಧ ಪಟ್ಟ ಇಲಾಖೆಗಳು ಮುಂಜಾಗ್ರತಾ ಕ್ರಮ ಕೈಗೊಂಡು ರಸ್ತೆ ಸರಿಪಡಿಸಬೇಕಿದೆ.

 

 

ವರದಿ _ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version