ಹೃದಯಾಘಾತದಿಂದ ಹಿರಿಯ ಪೊಲೀಸ್ ಅಧಿಕಾರಿ ನಿಧನ.

ಹೃದಯಾಘಾತದಿಂದ ಹಿರಿಯ ಪೊಲೀಸ್ ಅಧಿಕಾರಿ ನಿಧನ.

 

ತುಮಕೂರು_ಹಿರಿಯ ಪೊಲೀಸ್ ಅಧಿಕಾರಿ ,ಹಾಗೂ ಸಹಾಯಕ ನಿರ್ದೇಶಕರು ರಾಜ್ಯ ಗುಪ್ತವಾರ್ತೆ ತುಮಕೂರು ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್ಎಂ ಶಿವಕುಮಾರ್ (54) ರವರು ಕಳೆದ ರಾತ್ರಿ 1 ಗಂಟೆ ಸಮಯದಲ್ಲಿ ತುಮಕೂರು ನಗರದ ಪೊಲೀಸ್ ಕ್ವಾಟ್ರಸ್ ನಲ್ಲಿ ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ.

 

 

ಮೃತ ಶಿವಕುಮಾರ್ ರವರು ಪತ್ನಿ ವಿಜಯಲಕ್ಷ್ಮಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಶಿವಕುಮಾರ್ ಅವರ ಸ್ವಗೃಹ ಚಿಂಗೂಬನನಹಳ್ಳಿ ,ಜಗಳೂರು ಹೋಬಳಿ ,ಚಿತ್ರದುರ್ಗ ಜಿಲ್ಲೆಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.

 

 

 

ಇನ್ನು ಶಿವಕುಮಾರ್ ರವರ ನಿಧನಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಕಂಬನಿ ಮಿಡಿದಿದ್ದು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

 

 

ವರದಿ _ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!