ಹಾಸ್ಟೆಲ್ ನಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಆಗದೆ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು.

ಹಾಸ್ಟೆಲ್ ನಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಆಗದೆ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು.

 

 

ತುಮಕೂರು_ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಆಗದೆ ಮನನೊಂದ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.

 

 

 

ತುಮಕೂರು ನಗರದ ಸದಾಶಿವ ನಗರದಲ್ಲಿ ವಾಸವಾಗಿರುವ ಮಂಜೇಶ್ ಎಂಬುವವರ ಮಗ ಶಿರಾ ನಗರದ ಖಾಸಗಿ ಪಿಯು ಕಾಲೇಜಿಗೆ ದಾಖಲಾಗಿದ್ದು ಹಾಸ್ಟೆಲ್ ನಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಆಗದೆ ರಜೆ ನಿಮಿತ್ ಮನೆಗೆ ಮರಳಿದ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

 

 

ಇನ್ನು ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಯನ್ನು ಜಿಷ್ನು (16) ಎಂದು ಗುರುತಿಸಲಾಗಿದ್ದು ಪೋಷಕರು ಸಹ ವಿದ್ಯಾಭ್ಯಾಸವನ್ನು ಮುಂದುವರಿಸಲು ತಿಳಿ ಹೇಳಿದ್ದರು . ಆದರೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೇಣು ತೆಗೆದು ಕೊಂಡು ಸೋಮವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಇನ್ನು ಕೆಲಸದ ನಿಮಿತ್ತ ಪೋಷಕರು ಆಚೆ ತೆರಳಿದ್ದು ಮನೆಗೆ ವಾಪಸ್ ಆದ ವೇಳೆ ಘಟನೆ ಬೆಳಕಿಗೆ ಬಂದಿದೆ .

 

 

ಇನ್ನು ಘಟನೆ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

 

ವರದಿ_ ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version