ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಹೃದಯಘಾತದಿಂದ ಸಾವು ತುಮಕೂರಿನಲ್ಲಿ ಘಟನೆ.

ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಹೃದಯಘಾತದಿಂದ ಸಾವು ತುಮಕೂರಿನಲ್ಲಿ ಘಟನೆ.

 

 

ತುಮಕೂರು – ಸರ್ಕಾರಿ ಶಾಲೆಯ ವಿದ್ಯಾರ್ಥಿ ಒಬ್ಬ ಹೋಬಳಿ ಮಟ್ಟದಲ್ಲಿ ನಡೆಯುತ್ತಿದ್ದ ಕ್ರೀಡೆಯಲ್ಲಿ ಭಾಗವಹಿಸಿ ಬಹುಮಾನ ಗೆದ್ದು ಬಹುಮಾನ ಸ್ವೀಕರಿಸುವ ಮುಂಚೆಯೇ ಹೃದಯ ಘಾತದಿಂದ ನಿಧನರಾಗಿರುವ ಹೃದಯವಿದ್ರಾವಕ ಘಟನೆ ತುಮಕೂರಿನ ಚಿಕ್ಕತೊಟ್ಟಿಳು ಕೆರೆಯಲ್ಲಿ ನಡೆದಿದೆ.

 

 

ಗುಲ್ಬರ್ಗ ಮೂಲದ ವಿದ್ಯಾರ್ಥಿ ಬೀಮ ಶಂಕರ್ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಹೋಬಳಿ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದು ಸದರಿ ವಿದ್ಯಾರ್ಥಿ ತುಮಕೂರು ತಾಲೂಕಿನ ಬೆಳೆದರ ಗ್ರಾಮದ ಗ್ರಾಮಂತರ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಇಂದು ನಡೆದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ದ್ವಿತೀಯ ಬಹುಮಾನವನ್ನು ರಿಲೇ ಆಟದಲ್ಲಿ ಪಡೆದಿದ್ದು ಬಹುಮಾನ ಸ್ವೀಕರಿಸುವ ಮುಂಚೆಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

 

 

 

 

ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ವಿದ್ಯಾರ್ಥಿಯ ಮೃತ ದೇಹವನ್ನು ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ ಇರಿಸಲಾಗಿದೆ.

 

 

 

ಇನ್ನು ಅಮೃತ ವಿದ್ಯಾರ್ಥಿ ಗುಲ್ಬರ್ಗ ಮೂಲದವನಾಗಿದ್ದು ವಿದ್ಯಾರ್ಥಿಯ ತಂದೆ ತಾಯಿ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು ಮಗನ ಸಾವಿನಿಂದ ಪೋಷಕರು ಕಂಗಾಲಾಗಿದ್ದು ಎಲ್ಲರ ಮನವು ಕಲಕುವಂತಿದೆ.

 

 

ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

 

 

ವರದಿ ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!