ಶಿಕ್ಷಕನಿಂದ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ BEO.

 

 

ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಬಿಇಓ ತಮ್ಮ ಕಚೇರಿಯಲ್ಲಿ ಶಿಕ್ಷಕರೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಸಾಕ್ಷಿ ಸಮೇತವಾಗಿ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ವೆಂಕಟೇಶ್​ ಲಂಚ ಪಡೆಯುತ್ತಿದ್ದ ಬಿಇಓ.

 

 

 

 

ಶಿಕ್ಷಕ ಆಂಜನೇಯ ನಾಯಕ್​​ ಎಂಬುವವರನ್ನ ವರ್ಗಾವಣೆ ಮಾಡಲು ಬಿಇಓ 50,000ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಎಸಿಬಿ ಅಧಿಕಾರಿಗಳ ಬಳಿ ತೆರಳಿ ದೂರು ನೀಡಿದ್ದರು. ಅವರ ಮಾಹಿತಿಯಂತೆ ಬಿಇಓಗೆ ಶಿಕ್ಷಕರು 10,000 ರೂಪಾಯಿ ಲಂಚ ಕೊಡಲು ಮುಂದಾಗಿದ್ದರು. ಈ ವೇಳೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಸಾಕ್ಷಿ ಸಮೇತ ಅಧಿಕಾರಿಯನ್ನ ಹಿಡಿದಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version