ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ ನಡುವೆ ಅಪಘಾತ. ಗಾಯಗಳುಗಳು ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ.

ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ ನಡುವೆ ಅಪಘಾತ. ಗಾಯಗಳುಗಳು ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ.

 

 

 

ತುಮಕೂರು_ಬುಧವಾರ ಬೆಳಗ್ಗೆ 9.30 ರ ಸಮಯದಲ್ಲಿ ರಸ್ತೆ ಬದಿ ನಿಂತಿದ್ದ ಖಾಸಗಿ ಬಸ್ಸಿಗೆ ಮತ್ತೊಂದು ಕೆಎಸ್ಆರ್ಟಿಸಿ ಬಸ್ ಹಿಂಬದಿಯಿಂದ ಗುದ್ದಿದ ಪರಿಣಾಮ ಪ್ರಯಾಣಿಕರಿಗೆ ಗಂಭೀರ ಗಾಯಗಳಾದ ಘಟನೆ ತುಮಕೂರು ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿಯ ಹಿರೇಹಳ್ಳಿ ಬಳಿ ನಡೆದಿದೆ.

 

ತಿಂಡಿ ತಿನ್ನಲು ಖಾಸಗಿ ಬಸ್ಸಿನ ಡ್ರೈವರ್ ರಸ್ತೆಬದಿಯಲ್ಲಿ ಗಾಡಿಯನ್ನು ನಿಲುಗಡೆ ಮಾಡಿ ತಿಂಡಿ ತಿನ್ನಲು ತೆರಳಿದರು ಇದೇ ಸಂದರ್ಭದಲ್ಲಿ ಬೆಂಗಳೂರು ತುಮಕೂರು ಮಾರ್ಗವಾಗಿ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಖಾಸಗಿ ಬಸ್ಸಿಗೆ ಹಿಂಬದಿಯಿಂದ ಗುದ್ದಿದ ಪರಿಣಾಮ ಎಂಟಕ್ಕೂ ಅಧಿಕ ಮಂದಿ ಗಾಯಗಳಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

 

 

ಘಟನೆಯಲ್ಲಿ ಜಕ್ಕೇನಹಳ್ಳಿ ಕೃಷ್ಣಮೂರ್ತಿ ಎಂಬುವವನಿಗೆ ಎರಡು ಕಾಲುಗಳು ಮುರಿದಿದ್ದು ಇತರ ಗಾಯಾಳುಗಳಿಗೆ ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

 

ಘಟನೆಯಲ್ಲಿ ಗಾಯಗೊಂಡ ಬೆಂಗಳೂರಿನ ಸುನೀತಾ ಎಂಬುವವರು ಕೆಎಸ್ಸಾರ್ಟಿಸಿ ಬಸ್ ಡ್ರೈವರ್ ನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

 

ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಘಟನೆ ನಡೆದಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

 

 

ವರದಿ _ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!