ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಾರು ಅಪಘಾತ:KSRTC ಬಸ್- ಕಾರಿನ ಮಧ್ಯೆ ಡಿಕ್ಕಿ
ಪ್ರಾಣಾಪಾಯದಿಂದ ಸಚಿವರು ಪಾರು
ಮೈಸೂರು: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಾರು ಅಪಘಾತಕ್ಕೊಳಗಾಗಿದ್ದು, ಪ್ರಾಣಾಪಾಯದಿಂದ ಸಚಿವರು ಹಾಗೂ ಕಾರು ಚಾಲಕ ಪಾರಾಗಿದ್ದಾರೆ.
ಪೆಟ್ರೋಲ್ ಹಾಕಿಸಿಕೊಂಡು ವಾಪಸ್ ತೆರಳುವಾಗ ಘಟನೆ ನಡೆದಿದ್ದು, KSRTC ಬಸ್ ಹಾಗೂ ಸಚಿವರ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.
ಮೈಸೂರಿನಿಂದ ಬೆಂಗಳೂರಿನ ಕಡೆಗೆ ಕೋಟಾ ಶ್ರೀನಿವಾಸ್ ಪೂಜಾರಿ ಪ್ರಯಾಣ ಬೆಳೆಸಿದ್ದರು ಎಂದು ತಿಳಿದು ಬಂದಿದ್ದು,ನೈಸ್ ರಸ್ತೆ ಬಳಿ ಅಪಘಾತ ಸಂಭವಿಸಿದೆ.