ಜಿಲ್ಲಾಧಿಕಾರಿಗಳ ಆಪ್ತ ಕಾರ್ಯದರ್ಶಿ ಬದಲಾವಣೆಗೆ ಅಹೋ ರಾತ್ರಿ ಧರಣಿ 

ಜಿಲ್ಲಾಧಿಕಾರಿಗಳ ಆಪ್ತ ಕಾರ್ಯದರ್ಶಿ ಬದಲಾವಣೆಗೆ ಅಹೋ ರಾತ್ರಿ ಧರಣಿ 

 

 

ತುಮಕೂರು _ಹಲವಾರು ವರ್ಷಗಳಿಂದ ವರ್ಗಾವಣೆಯಾಗದೆ ಒಂದೇ ಜಾಗದಲ್ಲಿ ತಿಕಾಣಿ ಹೂಡಿರುವ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಹೇರಂಬ ವರ್ಗಾವಣೆಗೆ ಅಗ್ರಹಿಸಿ ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಹೋರಾಟಗಾರರ ವೇದಿಕೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಅನಿರ್ಧಿಷ್ಟಾವಧಿ ಹೋರಾಟ ಆರಂಭಿಸಿದ್ದಾರೆ.

 

 

 

 

ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಹೋರಾಟಗಾರರ ವೇದಿಕೆಯ ಅಧ್ಯಕ್ಷ ಹೆಚ್ ಜಿ ರಮೇಶ್ ನೇತೃತ್ವದಲ್ಲಿ ಸಂಘಟಿತರಾದ ನೂರಾರು ಹೋರಾಟಗಾರರು ಹಲವಾರು ವರ್ಷಗಳಿಂದ ವರ್ಗಾವಣೆಯಾಗದೆ ಒಂದೇ ಜಾಗದಲ್ಲಿ ಟಿಕ್ಕಾಣಿ ಹೂಡಿರುವ ಹೇರಂಬ ಹಾಗೂ ಇತರೆ ಅಧಿಕಾರಿಗಳ ವರ್ಗಾವಣೆಗೊಳಿಸಬೇಕೆಂದು ಆಗ್ರಹಿಸಿದರು.

 

 

 

ಇದೇ ವೇಳೆ ಪ್ರತಿಭಟನಾ ನಿರತರನ್ನು ಉದ್ದೇಶಿಸಿ ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಹೋರಾಟಗಾರರ ವೇದಿಕೆ ರಮೇಶ್ ಮಾತನಾಡಿ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಹೇರಂಭ ಕಳೆದ 25 ವರ್ಷಗಳಿಂದ ಒಂದೇ ಜಾಗದಲ್ಲಿ ಠಿಕಾಣಿ ಹೂಡಿದ್ದಾರೆ, ತುಮಕೂರು ಜಿಲ್ಲೆಯಲ್ಲಿ ಎಷ್ಟು ಜನ ಜಿಲ್ಲಾಧಿಕಾರಿಗಳು ಬದಲಾವಣೆಯಾದರೂ ಸಹ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಮಾತ್ರ ಬದಲಾವಣೆಯಾಗಿಲ್ಲ, ಸರ್ಕಾರಿ ವ್ಯವಸ್ತೆಯಲ್ಲಿ ಇವರಿಗೆ ವರ್ಗಾವಣೆ ಇಲ್ಲವೇ,ಅಥವಾ ಇವರಿಗೆ ವರ್ಗಾವಣೆಯಿಂದ ವಿನಾಯಿತಿ ನೀಡಲಾಗಿದೆಯೇ, ಅಷ್ಟು ಪ್ರಭಾವಶಾಲಿಯೇ ಎಂದು ಖಾರವಾಗಿ ಪ್ರಶ್ನಿಸಿದರು.

 

 

 

 

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೇರೂರಿರುವ ಹೇರಂಭ ಸೇರಿದಂತೆ ಭ್ರಷ್ಟ ಅಧಿಕಾರಿಗಳು ವರ್ಗಾವಣೆಯಾಗುವವರೆಗೂ ಹೋರಾಟ ಮುಂದುವರೆಸುವುದಾಗಿ ಎಚ್ಚರಿಸಿದರು.

 

 

 

ಪ್ರತಿಭಟನಾಕಾರರಿಗೆ ಜಿಲ್ಲಾಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸದ ಹಿನ್ನಲೆ ರಾಜ್ಯ ಮಾಹಿತಿ ಹಕ್ಕು ಹೋರಾಟಗಾರರು ಜಿಲ್ಲಾಧಿಕಾರಿಕಾರಿಗಳ ಕಚೇರಿ ಮುಂಭಾಗ ಮಲಗಿ ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version