ಜುಲೈ 24 ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ತುಮಕೂರಿಗೆ ಭೇಟಿ.

ಜುಲೈ 24 ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ತುಮಕೂರಿಗೆ ಭೇಟಿ.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕದ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಜುಲೈ 24ರಂದು ತುಮಕೂರಿಗೆ ಭೇಟಿ ನೀಡಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ರವರು ತಿಳಿಸಿದ್ದಾರೆ.

 

ಇದು ತುಮಕೂರಿನ ಖಾಸಗಿ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಲೀಂ ಅಹಮದ್ ರವರು ಜುಲೈ 24ರಂದು ಬೆಳಗ್ಗೆ ಸುರ್ಜೇವಾಲ ಭೇಟಿ ನೀಡಲಿದ್ದು ಈ ಭಾಗದ 5 ಜಿಲ್ಲೆಗಳಾದ ತುಮಕೂರು ,ಕೋಲಾರ ,ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ವಿಭಾಗಕ್ಕೆ ಸಂಬಂಧಪಟ್ಟಂತೆ ಈ ಭಾಗದ ಹಿರಿಯ ಮುಖಂಡರು, ಮಾಜಿ ಹಾಲಿ ಸಂಸದರು, ಶಾಸಕರು, ಮುಂಚೂಣಿ ಘಟಕದ ನಾಯಕರು, ಎಲ್ಲಾ ವಿಭಾಗದ ಜಿಲ್ಲಾಧ್ಯಕ್ಷರ ಗಳು ಸೇರಿದಂತೆ ಪ್ರಮುಖ ಮುಖಂಡರ ಸಭೆ ನಡೆಯಲಿದ್ದು ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ವಿಧಾನಪರಿಷತ್ ಚುನಾವಣೆ, ಪಕ್ಷ ಸಂಘಟನೆ ಸೇರಿದಂತೆ ಮುಖಂಡರೊಂದಿಗೆ ಮುಕ್ತ ಸಂವಾದ ನಡೆಸುವ ಮೂಲಕ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಎಲ್ಲಾ ಮುಖಂಡರ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದರು.

 

ಅಂದಿನ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಸ್ ಆರ್ ಪಾಟೀಲ್, ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕರಾದ ಡಾಕ್ಟರ್ ಜಿ ಪರಮೇಶ್ವರ್ ಸೇರಿದಂತೆ ಕೆಪಿಸಿಸಿ ಕಾರ್ಯದರ್ಶಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

 

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಡಾಕ್ಟರ್ ಜಿ ಪರಮೇಶ್ವರ್, ಮಾಜಿ ಶಾಸಕರಾದ ಕೆ ಎನ್ ರಾಜಣ್ಣ, ಮಾಜಿ ಸಚಿವರಾದ ಟಿಬಿ ಜಯಚಂದ್ರ, ಕುಣಿಗಲ್ ಶಾಸಕ ರಂಗನಾಥ್, ಚಂದ್ರಪ್ಪ, ತುಮಕೂರು ನಗರ ಮಾಜಿ ಶಾಸಕರಾದ ರಫೀಕ್ ಅಹಮದ್, ಶಫಿ ಅಹಮದ್ ಕಾಂಗ್ರೆಸ್ ಮುಖಂಡರಾದ ಮುರಳಿದರ ಹಾಲಪ್ಪ ಸೇರಿದಂತೆ ಪ್ರಮುಖರು ಹಾಜರಿದ್ದರು

Leave a Reply

Your email address will not be published. Required fields are marked *

You cannot copy content of this page

error: Content is protected !!