ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ ಕೊಲೆಯಲ್ಲಿ ಅಂತ್ಯ 

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ ಕೊಲೆಯಲ್ಲಿ ಅಂತ್ಯ 

 

ಹನೂರು:ಸಂಬಧಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆಯಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು ತಾಲೂಕಿನ ರಾಮಾಪುರ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಬಡಾವಣೆಯ ವೆಂಕಟೇಶ ಮೃತ ಎಂದು ಗುರುತಿಸಲಾಗಿದೆ.

 

 

 

 

 

 

 

 

 

 

 

 

 

 

 

 

ಈ ಘಟನೆಯು ಗುರುವಾರ ತಡರಾತ್ರಿ ಅದೇ ಗ್ರಾಮದ ಚಿಕ್ಕಮ್ಮನ ಮಗ ಶಶಿಕುಮಾರ್ ಹಾಗೂ ವೆಂಕಟೇಶ ನಡುವೆ ಹಣಕಾಸಿನ ವಿಚಾರಕ್ಕೆ ಗಲಾಟೆ ಆಗಿದೆ ಎನ್ನಲಾಗಿದೆ ಬಳಿಕ ಜಗಳದಲ್ಲಿ ವೆಂಕಟೇಶಗೆ ಕಬ್ಬಿಣದ ರಾಡ್ ನಿಂದ ಬಲವಾದ ಪೆಟ್ಟು ಬಿದ್ದ ಹಿನ್ನಲೆ ತೀವ್ರ ರಕ್ತ ಶ್ರಾವವಾಗಿತ್ತು ನಂತರ ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿತ್ತು. ಆದರೆ ಶುಕ್ರವಾರ ಬೆಳಗ್ಗೆ ಗಾಯಾಗೊಂಡಿದ್ದ ವೆಂಕಟೇಶ್ ಮೃತ ಪಟ್ಟಿದ್ದಾನೆ ಎಂದು ಪೊಲೀಸರಿಂದ ತಿಳಿದುಬಂದಿದೆ.

 

 

 

 

 

 

 

 

 

 

 

ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮಕೈಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಹಾಗೂ ಕೊಳ್ಳೇಗಾಲ ಡಿವೈಎಸ್‌ಪಿ ಸೋಮೇಗೌಡ ಸೇರಿದಂತೆ ಸಿಬ್ಬಂಧಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ವರದಿ :- ನಾಗೇಂದ್ರ ಪ್ರಸಾದ್

Leave a Reply

Your email address will not be published. Required fields are marked *

You cannot copy content of this page

error: Content is protected !!