ತುಮಕೂರಿನಲ್ಲಿ ಮತ್ತೊಬ್ಬ ಪುನೀತ್ ರಾಜಕುಮಾರ್ ಅಭಿಮಾನಿ ಸಾವು.

ತುಮಕೂರಿನಲ್ಲಿ ಮತ್ತೊಬ್ಬ ಪುನೀತ್ ರಾಜಕುಮಾರ್ ಅಭಿಮಾನಿ ಸಾವು.

ಕಳೆದ ಶುಕ್ರವಾರ ನಟ ಪುನೀತ್ ರಾಜಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು ರಾಜ್ಯ, ರಾಷ್ಟ್ರ ಹಾಗೂ ವಿದೇಶಗಳಲ್ಲಿ ಕೋಟ್ಯಂತರ ಅಭಿಮಾನಿಗಳ ಪಾಲಿಗೆ ಉತ್ತಮ ನಟರಾಗಿದ್ದ ಪುನೀತ್ ರಾಜಕುಮಾರ್ ಅವರ ಸಾವು ಅವರ ಅಭಿಮಾನಿಗಳ ಪಾಳಯದಲ್ಲಿ ತೀವ್ರ ಆತಂಕ ತಂದೊಡ್ಡಿದೆ.

 

ಅವರ ಹಠಾತ್ ನಿಧನದಿಂದ ಅವರ ಅಭಿಮಾನಿಗಳು ಕಂಗೆಟ್ಟಿದ್ದು ಇಂದು ತುಮಕೂರು ತುಮಕೂರು ತಾಲೂಕಿನ ಅರೇಗುಜ್ಜನಹಳ್ಳಿ ಗ್ರಾಮದ ರವಿಕುಮಾರ್ ಎಂಬಾತ ಪುನೀತ್ ರಾಜಕುಮಾರ್ ಅವರ ನಿಧನದಿಂದ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರರು ಎಂದು ತಿಳಿದುಬಂದಿದೆ ನಾಲ್ಕುದಿನಗಳಿಂದ ಊಟ ತಿಂಡಿಯನ್ನು ತ್ಯಜಿಸಿದ್ದಾರೆ ರವಿಕುಮಾರ್ ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

 

ಇದರ ಮೂಲಕ ತುಮಕೂರು ಜಿಲ್ಲೆಯಲ್ಲಿ ಮೂರು ಮಂದಿ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಸಾವಿಗೀಡಾಗಿದ್ದಾರೆ.

 

ಇನ್ನು ಪುನೀತ್ ರಾಜಕುಮಾರ್ ಅವರ ಸಹೋದರರಾದ ರಾಘವೇಂದ್ರ ರಾಜಕುಮಾರ್ ಹಾಗೂ ಶಿವರಾಜ್ ಕುಮಾರ್ ಅವರು ಅವರ ಅಭಿಮಾನಿಗಳಿಗೆ ಸಾಕಷ್ಟು ಕಿವಿಮಾತುಗಳನ್ನು ಹೇಳಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ ಆದರೆ ಇದ್ಯಾವುದೂ ಅಭಿಮಾನಿಗಳ ಕಿವಿಕೊಡದೆ ಸಾವಿನ ಅಂಚಿಗೆ ಸಿಗುತ್ತಿರುವುದು ನಿಜಕ್ಕೂ ನೋವಿನ ಸಂಗತಿ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version