ಕನ್ನಡ ಬಾವುಟ ಸುಟ್ಟು ವಿಕೃತಿ ಮೆರೆದಿದ್ದ ಮೂವರು ಆರೋಪಿಗಳ ಬಂಧನ

ಕನ್ನಡ ಬಾವುಟ ಸುಟ್ಟು ವಿಕೃತಿ ಮೆರೆದಿದ್ದ ಮೂವರು ಆರೋಪಿಗಳ ಬಂಧನ

 

ಬೆಳಗಾವಿ: ಕನ್ನಡ ಬಾವುಟ ಸುಟ್ಟು, ಜಗಜ್ಯೋತಿ ಬಸವಣ್ಣನವರ ಚಿತ್ರಕ್ಕೆ ಸೆಗಣಿ ಮೆತ್ತಿ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

 

ಜಿಲ್ಲೆಯ ಖಾನಾಪುರದಲ್ಲಿ ಸೋಮವಾರ ಈ ಘಟನೆ ನಡೆದಿತ್ತು. ಈ ಘಟನೆಯ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ

 

 

ಬಂಧಿತರನ್ನು ಸಂಜು ಗುರವ, ಸಚಿನ್ ಗುರವ ಹಾಗೂ ಗಣೇಶ ಪೆಡ್ನೇಕರ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

 

ವರದಿ _ ವಿಜಯ ಭಾರತ ನ್ಯೂಸ್ ಡೆಸ್ಕ್

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version