ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದ ಯುವಕನ ಮೇಲೆ ಮಾರಕಾಸ್ತದಿಂದ ಹಲ್ಲೆ- ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು

ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದ ಯುವಕನ ಮೇಲೆ  ಮಾರಕಾಸ್ತದಿಂದ ಹಲ್ಲೆ- ಚಿಕಿತ್ಸೆ ಫಲಕಾರಿಯಾಗದೆ ಸಾವು.

 

 

ತಿಪಟೂರು: ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ವ್ಯಕ್ತಿಯೋರ್ವನ ಮೇಲೆ ಅಪರಿಚಿತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ತಾಲೂಕಿನ ರಂಗಾಪುರ ಹೊಸಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ದಿವಾಕರ್(33), ನಗರದ ವಿದ್ಯಾನಗರದ ಬಡಾವಣೆ ನಿವಾಸಿ ಎಂದು ತಿಳಿದು ಬಂದಿದೆ.

 

 

ನಿನ್ನೆ ರಾತ್ರಿ ಸ್ನೇಹಿತರೊಂದಿಗೆ ರಂಗಾಪುರ ಹೊಸಹಳ್ಳಿ ಗ್ರಾಮದ ಬಳಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವಾಗ ಸ್ಥಳಕ್ಕೆ ಬಂದ ಮೂರ್ನಾಲ್ಕು ಅಪರಿಚಿತ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ದುಷ್ಕರ್ಮಿಗಳ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ, ದಿವಾಕರನನ್ನು ಹೆಚ್ಚಿನ ಚಿಕಿತ್ಸೆಗೆ ಹಾಸನದ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

ಕಳೆದ ಕೆಲವು ವರ್ಷಗಳ ಹಿಂದೆ ತುಮಕೂರಿನ ಶಾಂತಿನಗರದಲ್ಲಿ ವಾಸವಿದ್ದ ದಿವಾಕರ್ ತಿಪಟೂರು ತಾಲೂಕಿನ ಹುಚ್ಚೇನಹಳ್ಳಿ ಗ್ರಾಮದವನಾಗಿದ್ದು ಇತ್ತೀಚೆಗೆ ತಿಪಟೂರಿನಲ್ಲಿ ತನ್ನ ಕುಟುಂಬದವರಿಗೆ ವಾಸವಿದ್ದ ಎನ್ನಲಾಗಿದೆ.

 

 

ಕಳೆದ ಎರಡು ವರ್ಷದ ಹಿಂದೆ ತುಮಕೂರಿನ ಕಲ್ಯಾಣ ಮಂಟಪ ಒಂದರಲ್ಲಿ ಈತನ ಮೇಲೆ ಹಲ್ಲೆಗೆ ಯತ್ನಿಸಲಾಗಿದ್ದು ಅಂದು ಹಲ್ಲೆಯಿಂದ ಬಚಾವಾಗಿದ್ದ ಎನ್ನಲಾಗಿದೆ.

 

 

ಆದರೆ ಹುಟ್ಟುಹಬ್ಬ ಆಚರಿಸಿಕೊಳ್ಳುವ ವೇಳೆ ಅಪರಿಚಿತ ವ್ಯಕ್ತಿಗಳಿಂದ ಹಲ್ಲೆ ನಡೆದಿದ್ದು ಮುಖಕ್ಕೆ ಗಂಭೀರ ಗಾಯಗೊಂಡಿದ್ದ ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

 

 

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version