ಪಾಲಿಕೆ ನೌಕರರ ಮುಷ್ಕರಕ್ಕೆ ಬೆಂಬಲ ನೀಡಿದ ಅಟಿಕ ಬಾಬು.

ಪಾಲಿಕೆ ನೌಕರರ ಮುಷ್ಕರಕ್ಕೆ ಬೆಂಬಲ ನೀಡಿದ ಅಟಿಕ ಬಾಬು.

 

 

 

ತುಮಕೂರು – ತುಮಕೂರು ಮಹಾನಗರ ಪಾಲಿಕೆಯ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು ತುಮಕೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಬೊಮ್ಮನಹಳ್ಳಿ ಬಾಬು ರವರು ಪ್ರತಿಭಟನಾ ಸ್ಥಳಕ್ಕೆ ತೆರಳಿ ಪಾಲಿಕೆ ನೌಕರರ ಪ್ರತಿಭಟನೆಗೆ ಸಾತ್ ನೀಡಿದರು.

 

 

 

ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದ ಹಲವು ಭಾಗದಲ್ಲಿ ಪಾಲಿಕೆ ನೌಕರರು ಪ್ರತಿಭಟನೆ ನಡೆಸುತ್ತಿದ್ದು ನ್ಯಾಯ ಸಮ್ಮತ ಬೇಡಿಕೆಗಳನ್ನ ಈಡೇರಿಸುವಲ್ಲಿ ಸರ್ಕಾರ ಗಮನಹರಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ ಅವರು ಹಲವು ವರ್ಷಗಳಿಂದ ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರ ಸಂಕಷ್ಟಗಳು ಇನ್ನಾದರೂ ಬಗೆಹರಿಯಬೇಕು ಆ ಮೂಲಕ ಪಾಲಿಕೆ ನೌಕರರು ನೆಮ್ಮದಿಯ ಜೀವನ ಸಾಗಿಸಲು ಸರ್ಕಾರ ಮುಂದಾಗಬೇಕು ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಸಹ ಮುಂದಾಗಿ ಪಾಲಿಕೆ ನೌಕರರ ಸಮಸ್ಯೆಗಳನ್ನ ಬಗೆಹರಿಸಬೇಕು ಎಂದು ಒತ್ತಾಯಿಸಿದ ಅವರು ತಾವು ಸಹ ತಮ್ಮ ಪ್ರತಿಭಟನೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಪ್ರತಿಭಟನಾಕಾರರಿಗೆ ಧೈರ್ಯ ತುಂಬಿದರು.

 

 

 

ವರದಿ – ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version