ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ, ತುಮಕೂರಿನಲ್ಲಿ ಎಲ್ಲೆ ಮೀರಿದ ಅಪರಾಧ ಪ್ರಕರಣಗಳು

ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ, ತುಮಕೂರಿನಲ್ಲಿ ಎಲ್ಲೆ ಮೀರಿದ ಅಪರಾಧ ಪ್ರಕರಣಗಳು.

 

 

ತುಮಕೂರಿನಲ್ಲಿ ವ್ಯಕ್ತಿ ಒಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ತುಮಕೂರು ನಗರದ ಹೊರವಲಯದ ಮಾರನಾಯಕನ ಪಾಳ್ಯದ ಬಳಿ ನಡೆದಿದೆ.

 

 

ತುಮಕೂರು ನಗರದ ಕ್ಯಾತ್ಸಂದ್ರ ಬಳಿಯ ಮಾರನಾಯಕನ ಪಾಳ್ಯದ ಸ್ಮಶಾನದ ಬಳಿ ಘಟನೆ ನಡೆದಿದ್ದು ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದು ಮೃತಪಟ್ಟ ವ್ಯಕ್ತಿಯ ಮಾಹಿತಿ ಇದುವರೆಗೂ  ಲಭ್ಯವಾಗಿಲ್ಲ.

 

 

ಘಟನೆ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ಕೈಗೊಂಡಿದ್ದು ಮೃತ ವ್ಯಕ್ತಿಯ ಶವವನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರ.

 

 

 

ಕ್ಯಾತ್ಸಂದ್ರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

 

 

ನಗರದಲ್ಲಿ ಎಲ್ಲೆ ಮೀರಿದ ಅಪರಾಧ ಪ್ರಕರಣಗಳು.

 

ಇನ್ನು ತುಮಕೂರು ನಗರದಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಸಹಜವಾಗಿ ಸಾರ್ವಜನಿಕರಲ್ಲಿ ತೀವ್ರ ಆತಂಕ ತಂದೊಡ್ಡಿದೆ. 20 ದಿನದಲ್ಲಿ ಮೂರು ಕೊಲೆ ,ಕಳ್ಳತನ ಪ್ರಕರಣಗಳು ದಾಖಲಾಗುವ ಮೂಲಕ ಪೊಲೀಸ್ ಇಲಾಖೆಗೂ ಸಹ ದೊಡ್ಡ ತಲೆನೋವು ತರಿಸಿದ್ದು ಅಪರಾಧಗಳನ್ನು ತಡೆಯುವ ಸಲುವಾಗಿ ಪೊಲೀಸರು ಸಹ ಮುಂದಾಗಿದ್ದಾರೆ.

 

 

 

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version