ರಾಜ್ಯದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆ.

ರಾಜ್ಯದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆ.

ಮಾಜಿ ಮುಖ್ಯಮಂತ್ರಿಗಳು ಬಿಎಸ್ ಯಡಿಯೂರಪ್ಪನವರ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದಿನ ಸಭೆಯಲ್ಲಿ ಆಯ್ಕೆಯಾಗಿದ್ದಾರೆ.

 

ಉತ್ತರ ಕರ್ನಾಟಕದ ಲಿಂಗಾಯಿತ ಸಮುದಾಯದ ಪ್ರಭಾವಿ ಮುಖಂಡರಾಗಿದ್ದ ಬೊಮ್ಮಾಯಿಯವರು ನಾಳೆ ಮಧ್ಯಾನ 03:35ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

 

 

ನೂತನ ಸರ್ಕಾರದಲ್ಲಿ ನಾಲ್ವರು ಡಿಸಿಎಂಗಳು ಇರಲಿದ್ದಾರೆ ಇನ್ನು ನಾಳೆನ ಕಾರ್ಯಕ್ರಮದಲ್ಲಿ ನೂತನ ಮುಖ್ಯಮಂತ್ರಿಗಳ ಜೊತೆಯಲ್ಲಿ ಮೂವರು ಡಿಸಿಎಂ ಆಗಿ ಕಾರಜೋಳ, ಶ್ರೀರಾಮುಲು ಹಾಗೂ ಆರ್ ಅಶೋಕ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

 

ಬಿಎಸ್ವೈ ಅವರಿಂದಲೇ ನೂತನ ಸಿಎಂ ಹೆಸರು ಘೋಷಣೆ ಮಾಡುವ ಮೂಲಕ ಅಚ್ಚರಿ ಬೆಳವಣಿಗೆಗೆ ರಾಜ್ಯ ಬಿಜೆಪಿ ಸಭೆ ಸಾಕ್ಷಿಯಾಯಿತು.

 

ಇನ್ನು ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ಹಲವರ ಹೆಸರು ಕೇಳಿಬಂದಿತ್ತಾದರೂ ಕೊನೆಕ್ಷಣದಲ್ಲಿ ಎಲ್ಲರೂ ಅಚ್ಚರಿಪಡುವಂತೆ ಬಸವರಾಜ ಬೊಮ್ಮಾಯಿ ಅವರ ಹೆಸರು ಅಂತಿಮವಾಗಿ ನಿರ್ಣಯಿಸುವ ಮೂಲಕ ಬಿಜೆಪಿ ನೇತೃತ್ವದ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!