ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಕಮಲ ಹಿಡಿದ ಜೆಡಿಎಸ್ ಮುಖಂಡ -ಬೆಳ್ಳಿ ಲೋಕೇಶ್

ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಕಮಲ ಹಿಡಿದ ಜೆಡಿಎಸ್ ಮುಖಂಡ -ಬೆಳ್ಳಿ ಲೋಕೇಶ್.

 

ತುಮಕೂರು – ಇತ್ತೀಚೆಗೆ ಜೆಡಿಎಸ್ ಪಕ್ಷದ ವರಿಷ್ಠರು ಹಾಗೂ ಸ್ಥಳೀಯ ಮುಖಂಡರೊಂದಿಗೆ ಬೇಸರ ವ್ಯಕ್ತಪಡಿಸಿ ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದ ತುಮಕೂರಿನ ಹಿರಿಯ ಜೆಡಿಎಸ್ ಮುಖಂಡ ಬೆಳ್ಳಿ ಲೋಕೇಶ್ ರವರು ಇಂದು ಅಧಿಕೃತವಾಗಿ ತುಮಕೂರಿನಲ್ಲಿ ಬಿಜೆಪಿ ಪಕ್ಷವನ್ನ ಸೇರಿದ್ದಾರೆ.

 

 

 

 

 

 

 

ತುಮಕೂರಿನ ನೂತನ ಬಿಜೆಪಿ ಕಚೇರಿಯಲ್ಲಿ ತುಮಕೂರು ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್, ತುಮಕೂರು ಸಂಸದ ಜಿಎಸ್ ಬಸವರಾಜು ಹಾಗೂ ತುಮಕೂರು ಶಾಸಕ ಜಿ.ಬಿ ಜ್ಯೋತಿ ಗಣೇಶ್ ಅವರ ನೇತೃತ್ವದಲ್ಲಿ ಅಧಿಕೃತವಾಗಿ ಬಿಜೆಪಿ ಬಾವುಟವನ್ನು ಹಿಡಿಯುವ ಮೂಲಕ ಕಮಲ ಪಕ್ಷಕ್ಕೆ ಸೇರ್ಪಡೆಯಾದರು.

 

 

 

 

ಪಕ್ಷದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬೆಳ್ಳಿ ಲೋಕೇಶ್ ಸೇರಿದಂತೆ ಹಲವು ಸ್ಥಳೀಯ ಮುಖಂಡರು ಬೆಳ್ಳಿ ಲೋಕೇಶ್ ರವರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

 

 

 

 

 

ಇದೇ ಸಂದರ್ಭದಲ್ಲಿ ಮಾತನಾಡಿದ ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ರವರು  ಬೆಳ್ಳಿ ಲೋಕೇಶ್ ರವರನ್ನು ಬಿಜೆಪಿ ಪಕ್ಷಕ್ಕೆ ಬರಲು ಹಲವು ಬಾರಿ ಮನವಿ ಮಾಡಿದ್ದು ಈಗ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ತುಮಕೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಬಿಜೆಪಿ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ ಎಂದರು.

 

 

 

 

ಇದೇ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಸ್ಥಳೀಯ ಮುಖಂಡರು ಹನುಮಂತರಾಜು ಸೇರಿದಂತೆ ಸ್ಥಳೀಯ ಪದಾಧಿಕಾರಿಗಳು ಹಾಜರಿದ್ದರು.

 

 

 

ವರದಿ ಮಾರುತಿ ಪ್ರಸಾದ್ ತುಮಕೂರು

 

Leave a Reply

Your email address will not be published. Required fields are marked *

You cannot copy content of this page

error: Content is protected !!