BIGG NEWS: ಮುಂದಿನ 10 ದಿನಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ರಂದೀಪ್ ಸಿಂಗ್ ಸುರ್ಜೇವಾಲ

BIGG NEWS: ಮುಂದಿನ 10 ದಿನಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ರಂದೀಪ್ ಸಿಂಗ್ ಸುರ್ಜೇವಾಲ

 

 

 

ಕೊಡಗು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ರಾಜಕೀಯ ಚಟುವಟಿಕೆಗಳು ದಿನದಿಂದ ದಿನಕ್ಕೆ ರಂಗೇರುತ್ತಿದೆ. ರಾಜಕೀಯ ನಾಯಕರ ಅಬ್ಬರ ಪ್ರಚಾರ ಶುರುವಾಗಿದೆ.

 

 

 

ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ನಾನಾ ಕಸರತ್ತು ನಡೆಸಿದ್ದಾರೆ.ಹೀಗಾಗಿ ರಾಜ್ಯಕ್ಕೆ ಕೇಂದ್ರದ ನಾಯಕರು ಭೇಟಿ ನೀಡುತ್ತಿದ್ದು, ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಈ ನಡುವೆ ರಾಜಕೀಯ ನಾಯಕರ ಆರೋಪ- ಪ್ರತ್ಯಾರೋಪಗಳು ಜೋರಾಗಿ ನಡೆಯುತ್ತಿದ್ದಾರೆ.

 

 

 

 

ಭಾರತದಲ್ಲಿ ಕಾಂಗ್ರೆಸ್‌ ಪಕ್ಷ ಇತಿಹಾಸ ಸೃಷ್ಟಿಸಲಿದೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲ ಹೇಳಿದ್ದಾರೆ.

 

 

 

 

 

ನಗರದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಈ ಬಾರಿ ಜನತೆಯ ಆಯ್ಕೆ ಕಾಂಗ್ರೆಸ್‌ ಆಗಿರುತ್ತದೆ. ಬಿಜೆಪಿಯಿಂದ ಕರ್ನಾಟಕದ ಘನತೆಗೆ ಧಕ್ಕೆಯಾಗಿದೆ ಎಂದರು.40 % ಕಮಿಷನ್‌ ಸರ್ಕಾರದಿಂದ ರಾಜ್ಯದ ಜನತೆಗೆ ಅನ್ಯಾಯವಾಗಿದೆ. ಆದ್ದರಿಂದ ಬಿಜೆಪಿ ರಾಜ್ಯದಲ್ಲಿ ಕ್ಷಮಾಪಣಾ ಯಾತ್ರೆ ಮಾಡಬೇಕು. ಇನ್ನು 10 ದಿನಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗುತ್ತೆ ಎಂದಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version