ಬೈಕ್ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ದುರ್ಮರಣ, ಮತ್ತುರ್ವನ ಸ್ಥಿತಿ ಗಂಭೀರ

ಬೈಕ್ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ದುರ್ಮರಣ, ಮತ್ತುರ್ವನ ಸ್ಥಿತಿ ಗಂಭೀರ.

 

 

ತುಮಕೂರು_ವಿದ್ಯಾರ್ಥಿಗಳು ಕಾಲೇಜಿಗೆ ತೆರಳುತ್ತಿದ್ದ ವೇಳೆ ಲಾರಿಗೆ ಬೈಕ್ ಡಿಕ್ಕಿಯಾಗಿ ವಿದ್ಯಾರ್ಥಿ ಒಬ್ಬ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

 

ತುಮಕೂರಿನ ವಿದ್ಯೋದಯ ಕಾನೂನು ಕಾಲೇಜಿನ ವಿದ್ಯಾರ್ಥಿಗಳಾಗಿರುವ ವೆಂಕಟೇಶ್ ಹಾಗೂ ಲಕ್ಷ್ಮಣ್ ರಾವ್ ಎಂಬುವರು ಬೈಕ್ ನಲ್ಲಿ ತುಮಕೂರಿನ ವಿದ್ಯೋದಯ ಕಾಲೇಜಿಗೆ ಬರುತ್ತಿದ್ದರು. ಇದೇ ವೇಳೆ ಬೈಕ್ ಗೆ ಲಾರಿ ಗುದ್ದಿದ ಪರಿಣಾಮ ಸ್ಥಳದಲ್ಲೇ ನೆಲಮಂಗಲ ಮೂಲದ ವಿದ್ಯಾರ್ಥಿ ಲಕ್ಷ್ಮಣ್ ರಾವ್ ಮೃತಪಟ್ಟಿದ್ದು ಮತ್ತೋರ್ವ ವಿದ್ಯಾರ್ಥಿ ತುಮಕೂರಿನ ಹರಳೂರಿನ ವೆಂಕಟೇಶ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ .

 

ಇನ್ನು ಇಬ್ಬರು ವಿದ್ಯಾರ್ಥಿಗಳು ಬೈಕ್ ನಲ್ಲಿ ಕಾಲೇಜಿಗೆ ತೆರಳುವ ವೇಳೆ ಹೆಲ್ಮೆಟ್ ಹಾಕಿರಲಿಲ್ಲ ಎಂದು ತಿಳಿದು ಬಂದಿದೆ. ಇನ್ನು ನೆಲಮಂಗಲದ ಬೇಗೂರಿನ ಹೈವೇ ರಸ್ತೆಯಲ್ಲಿ ಅಪಘಾತ ಉಂಟಾಗಿದ್ದು ಸ್ಥಳದಲ್ಲಿ ಟ್ರಾಫಿಕ್ ಜಾಮ್ ಸಹ ಉಂಟಾಗಿದೆ.

 

ಮೃತಪಟ್ಟಿರುವ ವಿದ್ಯಾರ್ಥಿ ಲಕ್ಷ್ಮಣ್ ರಾವ್ ತುಮಕೂರಿನ ವಿದ್ಯೋದಯ ಕಾನೂನು ಕಾಲೇಜಿನಲ್ಲಿ 8ನೇ ಸೆಮಿಸ್ಟರ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಗಂಭೀರವಾಗಿ ಗಾಯಗೊಂಡಿರುವ ವೆಂಕಟೇಶ್ 6ನೇ ಸೆಮಿಸ್ಟರ್ನಲ್ಲಿ ಓದುತ್ತಿದ್ದರು.

 

 

ಇನ್ನು ವಿದ್ಯಾರ್ಥಿಗಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಆಡಳಿತ ಮಂಡಳಿ ತೀವ್ರ ಕಂಬನಿ ಮಿಡಿದಿದೆ.

 

ವರದಿ _ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version