ತುಮಕೂರು ಜಿಲ್ಲೆಯಲ್ಲಿ 7 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ: ಹೆಬ್ಬಾಕ ರವಿ

ತುಮಕೂರು ಜಿಲ್ಲೆಯಲ್ಲಿ 7 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ: ಹೆಬ್ಬಾಕ ರವಿ

ತುಮಕೂರು ಸಂಘಟನಾ ಜಿಲ್ಲೆಯಲ್ಲಿ ಏಳು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ತುಮಕೂರು ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ತಿಳಿಸಿದರು.

 

 

 

 

 

ಅವರು ನಗರದ ಬಿಹೆಚ್ ರಸ್ತೆಯ ಭಾರತೀಯ ಜನತಾ ಪಕ್ಷದ ಜಿಲ್ಲಾ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ತುಮಕೂರು ಸಂಘಟನಾ ಜಿಲ್ಲೆಯಲ್ಲಿ ಬಿಜೆಪಿ ಈ ಬಾರಿ ಏಳು ಕ್ಷೇತ್ರಗಳಲ್ಲಿ ಏಳು ಕ್ಷೇತ್ರಗಳಲ್ಲಿ ಸಹ ಜಯಗಳಿಸಲಿದ್ದು ರಾಜ್ಯದಲ್ಲಿ ಬಹುಮತ ಸಮಯದ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಿದರು.

 

 

 

 

 

 

ಜಿಲ್ಲೆಯಲ್ಲಿ ಬಿಜೆಪಿ ಭದ್ರವಾದ ನೆಲೆಯನ್ನು ಹೊಂದಿದ್ದು ಶ್ರದ್ಧಾವಂತ ಕಾರ್ಯಕರ್ತರ ಪಡೆಯೊಂದಿಗೆ ಉತ್ತಮವಾಗಿ ಪ್ರಚಾರ ಕಾರ್ಯ ನಡೆಸಿದ ಫಲವಾಗಿ ಬಿಜೆಪಿ ಏಳು ಕ್ಷೇತ್ರಗಳಲ್ಲಿ ಗೆಲುವನ್ನು ಸಾಧಿಸುವ ಮುನ್ಸೂಚನೆ ಕಂಡುಬಂದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಉತ್ತಮ ಜನಪರ ಯೋಜನೆಗಳನ್ನು ಅರಿತ ಮತದಾರರು ಈ ಬಾರಿ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದು ತಿಳಿಸಿದರು.

 

 

 

 

 

 

ಬಂಡಾಯದ ಯಾವುದೇ ಪರಿಣಾಮ ಪಕ್ಷಕ್ಕೆ ಆಗುವುದಿಲ್ಲ ಜನ ಪಕ್ಷದ ಕಾರ್ಯಕ್ರಮಗಳನ್ನು ಆಧರಿಸಿ ಮತ ನೀಡುತ್ತಾರೆ ಹೊರತು ಯಾವುದೇ ಬಂಡಾಯಗಾರರ ಮಾತಿಗೆ ಮನ್ನಣೆ ನೀಡುವುದಿಲ್ಲ ಹಾಗಾಗಿ ಜಿಲ್ಲೆಯಲ್ಲಿ ಸದೃಢವಾದ ಸಂಘಟನೆ ಮಾಡಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸ್ಪಷ್ಟವಾದ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

 

 

 

 

 

ಇದೇವೇಳೆ ಅವರು ನಿನ್ನೆ ನಡೆದ ಚುನಾವಣೆಯಲ್ಲಿ ಮತ ಚಲಾಯಿಸಿದ ಎಲ್ಲ ಮತದಾರರಿಗೆ ಪಕ್ಷದ ಪರವಾಗಿ ಪಕ್ಷದ ನಾಯಕರ ಪರವಾಗಿ ಕೃತಜ್ಞತೆಗಳನ್ನು ಹೇಳುವುದಾಗಿ ತಿಳಿಸಿದರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version